29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳ ಅಭಿಯಾನ ಶಿಬಿರ

ಗೇರುಕಟ್ಟೆ : ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಹಸುಗಳ ಅಭಿಯಾನ ಮಾಹಿತಿ ಶಿಬಿರ ಜೂ.16 ರಂದು ಸಂಘದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಕೇಶವ ಪೂಜಾರಿ ಪಿ ನಾಳ ಇವರ ಮುತುವರ್ಜಿಯಲ್ಲಿ ನಡೆಯಿತು. ಶಿಬಿರದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಇದರ ತಾಲ್ಲೂಕುವಾರು ಉಪ ವ್ಯವಸ್ಥಾಪಕರುಗಳಾದ ಡಾ. ಡಿ.ಆರ್ ಸತೀಶ್ ರಾವ್ ಸೂಕ್ತ ಸಲಹೆಗಳನ್ನು ಹೈನುಗಾರರಿಗೆ ನೀಡಿದರು. ಉಪ ವ್ಯವಸ್ಥಾಪಕ ಡಾ. ಗಣಪತಿ ಮಾಂಗ ಇವರು ಹಸುಗಳ ಬಂಜೆತನ ನೀವಾರಿಸಲು ಕೆಲವು ಸುಲಭವಾಗಿ ಸಿಗುವ ಹಳ್ಳಿ ಮದ್ದುಗಳನ್ನು ರೈತರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಸ್ತರಣಾಧಿಕಾರಿಗಳಾದ ರಾಜೇಶ್ ಪಿ ಕೆ ಮತ್ತು ಸಂದೀಪ್ ಭಾಗವಹಿಸಿದರು. ಈ ಅಭಿಯಾನ ಸಂಘದ ಸದಸ್ಯರು ಅದ ಜಯಚಂದ್ರ ಮುಂಚಲ್ಲಕ್ಕಿ ಮತ್ತು ರೋನಾಲ್ಡ್ ಮೋನಿಸ್ ಇವರ ಮನೆಯಲ್ಲಿ ಕೂಡ ನಡೆಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸೋಮಪ್ಪ ಗೌಡ, ನಿರ್ದೇಶಕರುಗಳಾದ ಸುಧಾಕರ ಮಜಲು, ಬಾಲಕೃಷ್ಣ ಶೆಟ್ಟಿ, ವಿಠಲ ಗೌಡ ಪಿ, ಜಗದೀಶ್ ಪೂಜಾರಿ, ಬೊಮ್ಮಣ ಗೌಡ, ರಮೇಶ ಶೆಟ್ಟಿ, ಶ್ರೀಧರ ಪೂಜಾರಿ, ಶ್ರೀಮತಿ ರೀತಾ ಪಿ ನಾಳ,ಶ್ರೀಮತಿ ವಿಜಯಾ ಮತ್ತು ಸಂಘದ ಕಾರ್ಯದರ್ಶಿ ಶ್ರೀಮತಿ ಸೌಮ್ಯ ಎಂ ಹಾಗೂ ಸಿಬ್ಬಂದಿ ವರ್ಗ ಕೆ ವೆಂಕಪ್ಪ ಪೂಜಾರಿ, ಸವಿತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಆಶ್ರಯದಲ್ಲಿ 418 ಶಾಲೆಗಳಿಗೆ ರೂ.2.50 ಕೋಟಿ ಮೊತ್ತದ 3472 ಜೊತೆ ಪೀಠೋಪಕರಣ ವಿತರಣೆಗೆ ಡಾ.ಹೆಗ್ಗಡೆ ಚಾಲನೆ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya
error: Content is protected !!