August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು: ಪೊಮ್ಮಾಜೆ ಜನರಿಗೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾದ ಏರ್‌ಟೆಲ್ ಹಾಗೂ ಬಿಎಸ್‌ಎನ್‌ಎಲ್ ಟವರ್

ಬೆಳ್ತಂಗಡಿ : ಸೋಣಂದೂರು ಗ್ರಾಮದ ಪೂಮ್ಮಾಜೆ ಇಲ್ಲಿನ ನಾಗರಿಕರ ಹೆಚ್ಚಿನ ಸಮಸ್ಯೆ ಎಂದರೆ ಮೊಬೈಲ್ ನೆಟ್ವರ್ಕ್.
ಪೂಮ್ಮಾಜೆ- ಪಣಕಜೆ ಭಾಗದಲ್ಲಿ ಏರ್‌ಟೆಲ್ ಹಾಗೂ ಬಿಎಸ್‌ಎನ್‌ಎಲ್ ಮೂರು ಟವರ್ ಗಳಿದ್ದರೂ ಜನತೆಗೆ ಯಾವ ಪ್ರಯೋಜನಕ್ಕೂ ಇಲ್ಲದಂತಾಗಿದೆ. ಗ್ರಾಹಕರು ಈ ಟವರ್ಗಳ ಅಡಿಯಲ್ಲಿ ನಿಂತರೂ ನೆಟ್ವರ್ಕ್ ಸಿಗದಿರುವುದು ವಿಶ್ವದ ವಿಚಿತ್ರ ಸಂಗತಿಗಳಲ್ಲಿ ಒಂದು.

ಉದ್ಯೋಗಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಅಧ್ಯಾಪಕರಿಗೆ ಈ ನೆಟ್ವರ್ಕ್ ಸಮಸ್ಯೆಯಿಂದ ಆಗುವ ತೊಂದರೆ ಅಷ್ಟಿಷ್ಟಲ್ಲ. ಆನ್ಲೈನ್ ನಲ್ಲಿ ಆರ್ಡರ್ ಮಾಡಿದ ವಸ್ತುಗಳನ್ನು ಡೆಲಿವೆರಿ ಬಾಯ್ ಗಳು ತಗೊಂಡು ಬಂದು ಆರ್ಡರ್ ಮಾಡಿದವರಿಗೆ ತಲುಪಿಸೋಣ ಅಂದ್ರೆ ಮನೆಯ ಮುಂಭಾಗಕ್ಕೆ ಬಂದರೂ ನೆಟ್ವರ್ಕ್ ಇಲ್ಲಾ. ಇನ್ನು ಸಂಬಂಧಪಟ್ಟ ಕಂಪನಿಯ ಅಧಿಕಾರಿಗಳಿಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಪೋಮ್ಮಾಜೆಯ ಆಸುಪಾಸಿನ ನಾಗರಿಕರಿಗೆ ಆಗುವ ಈ ತೊಂದರೆಯನ್ನು ಆದಷ್ಟು ಬೇಗ ನಿವಾರಿಸುವಂತೆ ಒತ್ತಾಯಿಸಲಾಗಿದೆ.
-ಯಸ್. ರಿಯಾಝ್

Related posts

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!