29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು: ಪೊಮ್ಮಾಜೆ ಜನರಿಗೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾದ ಏರ್‌ಟೆಲ್ ಹಾಗೂ ಬಿಎಸ್‌ಎನ್‌ಎಲ್ ಟವರ್

ಬೆಳ್ತಂಗಡಿ : ಸೋಣಂದೂರು ಗ್ರಾಮದ ಪೂಮ್ಮಾಜೆ ಇಲ್ಲಿನ ನಾಗರಿಕರ ಹೆಚ್ಚಿನ ಸಮಸ್ಯೆ ಎಂದರೆ ಮೊಬೈಲ್ ನೆಟ್ವರ್ಕ್.
ಪೂಮ್ಮಾಜೆ- ಪಣಕಜೆ ಭಾಗದಲ್ಲಿ ಏರ್‌ಟೆಲ್ ಹಾಗೂ ಬಿಎಸ್‌ಎನ್‌ಎಲ್ ಮೂರು ಟವರ್ ಗಳಿದ್ದರೂ ಜನತೆಗೆ ಯಾವ ಪ್ರಯೋಜನಕ್ಕೂ ಇಲ್ಲದಂತಾಗಿದೆ. ಗ್ರಾಹಕರು ಈ ಟವರ್ಗಳ ಅಡಿಯಲ್ಲಿ ನಿಂತರೂ ನೆಟ್ವರ್ಕ್ ಸಿಗದಿರುವುದು ವಿಶ್ವದ ವಿಚಿತ್ರ ಸಂಗತಿಗಳಲ್ಲಿ ಒಂದು.

ಉದ್ಯೋಗಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಅಧ್ಯಾಪಕರಿಗೆ ಈ ನೆಟ್ವರ್ಕ್ ಸಮಸ್ಯೆಯಿಂದ ಆಗುವ ತೊಂದರೆ ಅಷ್ಟಿಷ್ಟಲ್ಲ. ಆನ್ಲೈನ್ ನಲ್ಲಿ ಆರ್ಡರ್ ಮಾಡಿದ ವಸ್ತುಗಳನ್ನು ಡೆಲಿವೆರಿ ಬಾಯ್ ಗಳು ತಗೊಂಡು ಬಂದು ಆರ್ಡರ್ ಮಾಡಿದವರಿಗೆ ತಲುಪಿಸೋಣ ಅಂದ್ರೆ ಮನೆಯ ಮುಂಭಾಗಕ್ಕೆ ಬಂದರೂ ನೆಟ್ವರ್ಕ್ ಇಲ್ಲಾ. ಇನ್ನು ಸಂಬಂಧಪಟ್ಟ ಕಂಪನಿಯ ಅಧಿಕಾರಿಗಳಿಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಪೋಮ್ಮಾಜೆಯ ಆಸುಪಾಸಿನ ನಾಗರಿಕರಿಗೆ ಆಗುವ ಈ ತೊಂದರೆಯನ್ನು ಆದಷ್ಟು ಬೇಗ ನಿವಾರಿಸುವಂತೆ ಒತ್ತಾಯಿಸಲಾಗಿದೆ.
-ಯಸ್. ರಿಯಾಝ್

Related posts

ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣ: ನೊಂದ ಮಹಿಳೆ ವೀಟಾ ಮರೀನಾ ಡಿಸೋಜ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಆಮಂತ್ರಣ ವೇದಿಕೆ ಜಿಲ್ಲಾ ಅಧ್ಯಕ್ಷರಾಗಿ ವಿಂಧ್ಯಾ ಎಸ್.ರೈ ಮತ್ತು ಉಪಾಧ್ಯಕ್ಷರಾಗಿ ಅನಿತಾ ಶೆಟ್ಟಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya
error: Content is protected !!