29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೇಲಂತಬೆಟ್ಟು ಸಂಪತ್ ಆಚಾರ್ಯ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಸಂಪತ್ ಆಚಾರ್ಯ ಅವರು ಕಾರ್ಕಳದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಪತ್ ಅವರ ಎಡ ಕೈ ಗಂಭೀರ ಗಾಯಗೊಂಡ ಕಾರಣ ಸಂಪೂರ್ಣ ತೆಗೆಯಲಾಗಿದೆ. ತಲೆಗೆ ಬಲವಾದ ಗಾಯಗಳು ಆಗಿರುವ ಕಾರಣ ದೊಡ್ಡ ಮಟ್ಟದ ಶಸ್ತ್ರ ಚಿಕಿತ್ಸೆ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿರುತ್ತಾರೆ.

ತೀರ ಬಡಕುಟುಂಬದ ಸಂಪತ್ ಅವರ ಮನೆಗೆ ಈಗ ಆಧಾರ ಸ್ತಂಭವಾಗಿ ಇರುವವರು ಸಹೋದರ ಸೂರ್ಯ ಆಚಾರ್ಯ ಅವರು. ಮನೆಯ ಪೂರ್ಣ ಜವಾಬ್ದಾರಿ ಹೊತ್ತು ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ ಅವರಿಗೆ ಸಹೋದರ ಸಂಪತ್ ಅವರ ಚಿಕಿತ್ಸೆಯ ವೆಚ್ಚಕ್ಕೆ ಅವರಿಂದ ಆಗುವ ವೆಚ್ಚವನ್ನು ಬರಿಸುತ್ತಿದ್ದಾರೆ. ಆದರೆ ಮುಂದಿನ ಒಟ್ಟು ಆಸ್ಪತ್ರೆಯ ವೆಚ್ಚ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಬೇಕಾಗಿರುವ ಕಾರಣ ಸಜ್ಜನರಾದ ತಾವೆಲ್ಲರೂ ತಮ್ಮ ಕೈಯಲ್ಲಿ ಆಗುವ ಸಹಾಯ ಮಾಡಬೇಕಾಗಿ ವಿನಂತಿಸಲಾಗಿದೆ. ಸಹಾಯ ಮಾಡುವವರು phone pay/ Gpay no: 9731020346

Related posts

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya
error: Content is protected !!