29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಟೌನ್‌ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸಾದಲ್ಲಿ ಹಮ್ರಾ ವರ್’ದ ಬಾಲ ಮಾಸಿಕ ಚಂದಾ ಅಭಿಯಾನಕ್ಕೆ ಚಾಲನೆ

ಉಜಿರೆ : ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (SJM) ಕೇಂದ್ರ ಸಮಿತಿ ಪ್ರಕಟಿಸುವ ಹಮ್ರಾ ವರ್’ದ ಬಾಲ ಮಾಸಿಕದ ಚಂದಾ ಅಭಿಯಾನಕ್ಕೆ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸಾ, ಉಜಿರೆ ಟೌನ್‌ನಲ್ಲಿ ಅಧಿಕೃತ ಚಾಲನೆ ನೀಡಲಾಯಿತು.

ಜಮಾಅತ್ ಸಮಿತಿಯ ಅಧ್ಯಕ್ಷ ಅಬ್ದುಲ್ ರಹಿಮಾನ್ ART ಅವರು ಚಂದಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮದ್ರಸ ಸದರ್ ಉಸ್ತಾದ್ ಇಸ್ಮಾಯಿಲ್ ಹನೀಫಿ ಅವರು ವಿದ್ಯಾರ್ಥಿಗಳಲ್ಲಿ ಓದುವ ಅಭ್ಯಾಸ ಬೆಳೆಸುವ ಅಗತ್ಯತೆ ಹಾಗೂ ಪುಸ್ತಕಗಳು ಮತ್ತು ಮಾಸಿಕಗಳ ಮಹತ್ವದ ಕುರಿತು ಮಾತನಾಡಿದರು. ಹಮ್ರಾ ವರ್’ದ ಬಾಲ ಮಾಸಿಕವು ಮಕ್ಕಳಲ್ಲಿ ಓದುವ ಹವ್ಯಾಸ, ಸಾಹಿತ್ಯಾಸಕ್ತಿ ಹಾಗೂ ಇಸ್ಲಾಮಿಕ್ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಆಡಳಿತ ಸಮಿತಿಯ ಕೋಶಾಧಿಕಾರಿ ಖಾಲಿದ್, ಮದ್ರಸ ಮುಅಲ್ಲಿಂ ಮನ್ಸೂರ್ ಝುಹುರಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಭಿಯಾನದ ಉದ್ಘಾಟನಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಚಂದಾ ಕೂಪನ್‌ಗಳು ಹಾಗೂ ಪ್ರಚಾರ ಸಾಮಗ್ರಿಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಅಭಿಯಾನದಲ್ಲಿ ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಚಂದಾದಾರರನ್ನು ಸೇರಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮದ್ರಸ ಮುಅಲ್ಲಿಂ ಮನ್ಸೂರ್ ಝುಹುರಿ ಧನ್ಯವಾದ ಅರ್ಪಿಸಿದರು.

Related posts

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

Suddi Udaya

ಎಕ್ಸೆಲ್‌ನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿಗಳಿಗೆ

Suddi Udaya
error: Content is protected !!