31.1 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಫ್ಯಾಬ್ರಿಕ್ ಪೈಂಟ್ ಡಿಸೈನ್ ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಕನ್ಯಾಡಿ : ಸೇವಾಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ , ಧರ್ಮಸ್ಥಳ, ಶ್ರೀ ದುರ್ಗಾ ಮಾತೃ ಮಂಡಳಿ ಕನ್ಯಾಡಿ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 1 ತಿಂಗಳ ಫ್ಯಾಬ್ರಿಕ್ ಪೈಂಟ್ ಡಿಸೈನ್ ಉಚಿತ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಜೂ.15 ರಂದು ಕನ್ಯಾಡಿ ಸೇವಾನಿಕೇತನದಲ್ಲಿ ನಡೆಯಿತು.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.), ನಿರ್ದೇಶಕ ನೀಲಕಂಠ ಶೆಟ್ಟಿಯವರು ಶಿಬಿರಕ್ಕೆ ಚಾಲನೆ ನೀಡಿ, ಫ್ಯಾಬ್ರಿಕ್ ಪೇಯಿಂಟ್ ಡಿಸೈನ್ ಎಂಬುದು ಕೇವಲ ಒಂದು ಕಲೆ ಮಾತ್ರವಲ್ಲ, ಅದು ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸಬಲೀಕರಣದ ಉತ್ತಮ ಅವಕಾಶವಾಗಿದೆ. ಈ ತರಬೇತಿಯ ಮೂಲಕ ನೀವು ಹೊಸ ಕೌಶಲ್ಯಗಳನ್ನು ಕಲಿತು ನಿಮ್ಮ ಪ್ರತಿಭೆಯನ್ನು ಅಭಿವೃದ್ಧಿಪಡಿಸಿಕೊಳ್ಳುವ ಅವಕಾಶವನ್ನು ಪಡೆದುಕೊಳ್ಳಿ ಎಂದು ಶುಭಹಾರೈಸಿದರು.

ಸೇವಾಭಾರತಿ ಅಧ್ಯಕ್ಷ ಹಾಗೂ ಸೇವಾಧಾಮ ಸಂಸ್ಥಾಪಕ ವಿನಾಯಕ ರಾವ್ ರವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಯಶಸ್ಸು ಸಾಧಿಸಲು ದೊಡ್ಡ ಅವಕಾಶಗಳೇ ಬೇಕೆಂದಿಲ್ಲ, ಕಲಿಯುವ ಮನಸ್ಸು ಮತ್ತು ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಆಸಕ್ತಿ ಇದ್ದರೆ ಸಾಕು. ಕಲಿಕೆಯ ಹಂಬಲ ಇರುವ ವ್ಯಕ್ತಿಗೆ ಯಾವುದೇ ಕ್ಷೇತ್ರ ಕಷ್ಟವಾಗುವುದಿಲ್ಲ. ಇಂತಹ ತರಬೇತಿಗಳು ನಮ್ಮ ಪ್ರತಿಭೆಯನ್ನು ಗುರುತಿಸಲು, ಅದನ್ನು ಬೆಳೆಸಿಕೊಳ್ಳಲು ಹಾಗೂ ಜೀವನದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸಿಕೊಳ್ಳಲು ನೆರವಾಗುತ್ತವೆ. ಆದ್ದರಿಂದ ಈ ತರಬೇತಿಯನ್ನು ಒಂದು ಅವಕಾಶವಾಗಿ ಸ್ವೀಕರಿಸಿ, ಪ್ರತಿಯೊಬ್ಬರೂ ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಿ ಎಂದು ನುಡಿದರು.

ಮಂಗಳೂರು ವಿಭಾಗದ ರಾ. ಸ್ವ. ಸಂಘದ ಘುಮಂತು ಕಾರ್ಯ ವಿಭಾಗ ಪ್ರಮುಖರಾದ ಸುದರ್ಶನ್ ಕೆ ವಿ, ಉದ್ಯಮಿ ಶ್ರೀಮತಿ ಸ್ವಾತಿ ವಿಶ್ವಜಿತ್, ಕನ್ಯಾಡಿ ಶ್ರೀ ದುರ್ಗಾಮಾತೃ ಮಂಡಳಿ ಅಧ್ಯಕ್ಷೆ ಮಮತಾ ಬಿ, ಫ್ಯಾಷನ್ ಡಿಸೈನರ್ ಮತ್ತು ತರಬೇತುದಾರರಾದ ಭವ್ಯಶ್ರೀ ಕೀರ್ತಿರಾಜ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 20 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಕನ್ಯಾಡಿ ಶ್ರೀ ದುರ್ಗಾಮಾತೃ ಮಂಡಳಿಯ ಸದಸ್ಯರಾದ ಶ್ರೀಮತಿ ಸವಿತಾ ಎಂ ರಾವ್ ಸ್ವಾಗತಿಸಿ, ಕಾರ್ಯದರ್ಶಿ ಚಂದ್ರಾವತಿ ನಿರೂಪಿಸಿ, ಸೇವಾಭಾರತಿ ಡಾಕ್ಯುಮೆಂಟೇಷನ್ ಮಾನಿಟರಿಂಗ್ ಮತ್ತು ಇವೆಲ್ಯೂಷನ್ ಕಾರ್ಡಿನೇಟರ್ ಕು. ಸುಮ ಧನ್ಯವಾದವಿತ್ತರು.

Related posts

ಬೆಹರೆನ್ ದೇಶದ ಬಿಲ್ಲವ ವೈಭವ ಕಾರ್ಯಕ್ರಮದಲ್ಲಿ ರಕ್ಷಿತ್ ಶಿವರಾಮ್ ರವರಿಗೆ ಸನ್ಮಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Suddi Udaya

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

Suddi Udaya

ಮದ್ದಡ್ಕ: ಕಾರಿನೊಳಗೆ ಸಿಲುಕಿಕೊಂಡ ಮಗು: ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!