25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಕೊಡೆ ವಿತರಣೆ

ಬೆಳ್ತಂಗಡಿ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಇಲ್ಲಿನ 143 ವಿದ್ಯಾರ್ಥಿಗಳಿಗೆ “ಬದುಕು ಕಟ್ಟೋಣ ಬನ್ನಿ ” ತಂಡದ ಸಂಚಾಲಕ, ಉಜಿರೆ ಲಕ್ಷ್ಮಿ ಗ್ರೂಪ್ ಆಫ್ ಇಂಡಸ್ಟ್ರೀಸ್ ಇದರ ಮಾಲಕರಾದ ಮೋಹನ್ ಕುಮಾರ್ ಅವರು ಸ್ಕೂಲ್ ಬ್ಯಾಗ್ ಮತ್ತು ಕೊಡೆ ವಿತರಣೆ ಮಾಡಿದರು.

ಈ ಸಂದರ್ಭ “ಬದುಕು ಕಟ್ಟೋಣ ಬನ್ನಿ” ತಂಡದ ಸಂಚಾಲಕ ಮೋಹನ್ ಕುಮಾರ್ ಅವರು ಪುಸ್ತಕ ಸ್ಕೂಲ್ ಬ್ಯಾಗ್ ಮತ್ತು ಕೊಡೆ ವಿತರಿಸಿ ಮಾತನಾಡಿ ಅವಕಾಶಗಳನ್ನು ಸದುಪಯೋಗ ಪಡೆದುಕೊಂಡು ಉತ್ತಮ ಶಿಕ್ಷಣ ಪಡೆಯಬೇಕು, ಕೇವಲ ಅಂಕಗಳಿಗಾಗಿ ಕಲಿಯುವುದಲ್ಲ, ವಿದ್ಯಾರ್ಥಿಗಳು ಸಂಸ್ಕಾರಯುತರಾಗಿ ಬದುಕಬೇಕು, ವಿದ್ಯಾವಂತರಾಗಿ‌ ಮಾದರಿ ವ್ಯಕ್ತಿತ್ವ ಬೆಳೆಸಿಕೊಂಡು ಸಮಾಜದಲ್ಲಿ ಯಾವುದೇ ಕ್ಷೇತ್ರದಲ್ಲಿ ಉನ್ನತ ಸ್ಥಾನ‌ಕ್ಕೇರಿ ಇದೇ ರೀತಿ ಬಡತನ, ಕಷ್ಟದಲ್ಲಿ ಇರುವವರಿಗೆ ಶಿಕ್ಷಣಕ್ಕೆ ಸಹಾಯ ಮಾಡುವ ಮೂಲಕ ನೊಂದವರ ಸೇವೆ ಮಾಡಬೇಕು ಎಂದು ಆಶಿಸುತ್ತಾ ಶುಭ ಹಾರೈಸಿದರು.

ಎಸ್ ಡಿ ಎಂ ಸಿ ಅಧ್ಯಕ್ಷ ಉಮೇಶ್ ಗೌಡ, ಗ್ರಾ.ಪಂ. ಮಾಜಿ ಸದಸ್ಯೆ ವಿಮಲಾ , ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ಅಶೋಕ್ ಪಾಂಜಾಳ,
ನವೀನ್ ಕುಮಾರ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಅಪೇಕ್ಷ, ವೇದಿಕಾ, ತನ್ವಿ, ತನುಶ್ರೀ ಪ್ರಾರ್ಥಿಸಿದರು. ಸಹ ಶಿಕ್ಷಕ ರಫೀಕ್ ಸ್ವಾಗತಿಸಿ, ಮುಖ್ಯೋಪಾಧ್ಯಾಯ
ವಿಶ್ವನಾಥ ಎಂ.ಯು. ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಶಿಕ್ಷಕ ಮೋಹನ್ ವೈ.ಇ. ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕಿ ರೇಖಾ ವಂದಿಸಿದರು. ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಶಿಕ್ಷಕ ವೃಂದದವರು ಪಾಲ್ಗೊಂಡರು.

Related posts

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya
error: Content is protected !!