September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

ಬೆಳ್ತಂಗಡಿ : ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ನೇತೃತ್ವದಲ್ಲಿ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ‌ಹಾಗೂ ಒಕ್ಕೂಟ ಬಲವರ್ಧನೆ ತರಬೇತಿಯನ್ನು ಜೂ. 16 ರಂದು ಸಾಥೋಮ್ ಟವರ್ ಬೆಳ್ತಂಗಡಿ ಇಲ್ಲಿ ಆಯೋಜಿಸಲಾಗಿತ್ತು.

ಒಕ್ಕೂಟದ ಅಧ್ಯಕ್ಷೆ ಮಂಜುಳಾ ಜೋನ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ನಿಕಟಪೂರ್ವ ನಿರ್ದೇಶಕರಾದ ವಂ. ಫಾದರ್ ಬಿನೋಯ್ ಎಜೆ ರವರು ಒಕ್ಕೂಟಗಳು ಬಲವರ್ಧನೆಗೊಂಡು ಸಾಮಾಜಿಕ, ರಾಜಕೀಯ, ಆರ್ಥಿಕ, ಪರಿಸರ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಲು ಮುಂದಾಗಬೇಕು ಹಾಗೂ ಪದಾಧಿಕಾರಿಗಳ ಪಾತ್ರ ಮತ್ತು ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು. 2026 ರಿಂದ 2029 ವರೆಗಿನ ಒಕ್ಕೂಟದ ನೂತನ ಪದಾಧಿಕಾರಿಗಳು ಹಾಗೂ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಫಿಲೋಮಿನಾ ಸಿಜೆ, ಉಪಾಧ್ಯಕ್ಷರಾಗಿ ಉಷಾ, ಕಾರ್ಯದರ್ಶಿಯಾಗಿ ವೈಶಾಲಿ, ಜೊತೆ ಕಾರ್ಯದರ್ಶಿಯಾಗಿ ರೋಶನಿ, ಕೋಶಾಧಿಕಾರಿಯಾಗಿ ಶುಭ ಇವರನ್ನು ಆಯ್ಕೆ ಮಾಡಲಾಯಿತು. ಸಮಿತಿ ಸದಸ್ಯರಾಗಿ ಸಂಧ್ಯಾ ಉಮೇಶ್, ಪ್ರಭಾವತಿ, ಮಂಜುಳಾ ಜೋನ್, ಮಿನಿ ತೋಮಸ್ ಹಾಗೂ ಎಲಿಯಮ್ಮ ತೋಮಸ್ ಇವರನ್ನು ಆಯ್ಕೆ ಮಾಡಲಾಯಿತು. ಡಿ.ಕೆ.ಆರ್. ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾದರ್ ಆದರ್ಶ್ ಪಿ.ಎಸ್ ರವರು ಎಸ್.ಐ.ಆರ್ ಬಗ್ಗೆ ಮಾಹಿತಿ ನೀಡಿದರು. ಹಿಂದಿನ ಸಮಿತಿ ಸದಸ್ಯರು 3 ವರ್ಷ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದು ಅವರನ್ನು ಅಭಿನಂದಿಸಲಾಯಿತು. ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಎಲಿಯಮ್ಮ ತೋಮಸ್ ಸ್ವಾಗತಿಸಿದರು. ವೈಶಾಲಿ ವಂದಿಸಿದರು. ಸ್ನೇಹ ಜ್ಯೋತಿ ಒಕ್ಕೂಟದ 50 ಸದಸ್ಯರು ಭಾಗವಹಿಸಿದ್ದರು.

Related posts

ಮುಹಮ್ಮದ್ ಹಫೀಝ್ 100ನೇ ದಿನದ ಸ್ಮರಣಾರ್ಥ ಎಸ್.ಬಿ.ಎಸ್ ಕುಂಟಿನಿ ಮದರಸ ವತಿಯಿಂದ ರಕ್ತದಾನ ಶಿಬಿರ

Suddi Udaya

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಲಾಯಿಲ: ಬೈಕ್ ಸ್ಕಿಡ್ ಆಗಿ ಬಿದ್ದು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

Suddi Udaya
error: Content is protected !!