ಬೆಳ್ತಂಗಡಿ : ಸೋಣಂದೂರು ಗ್ರಾಮದ ಪೂಮ್ಮಾಜೆ ಇಲ್ಲಿನ ನಾಗರಿಕರ ಹೆಚ್ಚಿನ ಸಮಸ್ಯೆ ಎಂದರೆ ಮೊಬೈಲ್ ನೆಟ್ವರ್ಕ್.
ಪೂಮ್ಮಾಜೆ- ಪಣಕಜೆ ಭಾಗದಲ್ಲಿ ಏರ್ಟೆಲ್ ಹಾಗೂ ಬಿಎಸ್ಎನ್ಎಲ್ ಮೂರು ಟವರ್ ಗಳಿದ್ದರೂ ಜನತೆಗೆ ಯಾವ ಪ್ರಯೋಜನಕ್ಕೂ ಇಲ್ಲದಂತಾಗಿದೆ. ಗ್ರಾಹಕರು ಈ ಟವರ್ಗಳ ಅಡಿಯಲ್ಲಿ ನಿಂತರೂ ನೆಟ್ವರ್ಕ್ ಸಿಗದಿರುವುದು ವಿಶ್ವದ ವಿಚಿತ್ರ ಸಂಗತಿಗಳಲ್ಲಿ ಒಂದು.
ಉದ್ಯೋಗಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಅಧ್ಯಾಪಕರಿಗೆ ಈ ನೆಟ್ವರ್ಕ್ ಸಮಸ್ಯೆಯಿಂದ ಆಗುವ ತೊಂದರೆ ಅಷ್ಟಿಷ್ಟಲ್ಲ. ಆನ್ಲೈನ್ ನಲ್ಲಿ ಆರ್ಡರ್ ಮಾಡಿದ ವಸ್ತುಗಳನ್ನು ಡೆಲಿವೆರಿ ಬಾಯ್ ಗಳು ತಗೊಂಡು ಬಂದು ಆರ್ಡರ್ ಮಾಡಿದವರಿಗೆ ತಲುಪಿಸೋಣ ಅಂದ್ರೆ ಮನೆಯ ಮುಂಭಾಗಕ್ಕೆ ಬಂದರೂ ನೆಟ್ವರ್ಕ್ ಇಲ್ಲಾ. ಇನ್ನು ಸಂಬಂಧಪಟ್ಟ ಕಂಪನಿಯ ಅಧಿಕಾರಿಗಳಿಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಪೋಮ್ಮಾಜೆಯ ಆಸುಪಾಸಿನ ನಾಗರಿಕರಿಗೆ ಆಗುವ ಈ ತೊಂದರೆಯನ್ನು ಆದಷ್ಟು ಬೇಗ ನಿವಾರಿಸುವಂತೆ ಒತ್ತಾಯಿಸಲಾಗಿದೆ.
-ಯಸ್. ರಿಯಾಝ್













