29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಮಜಲುವಿನಲ್ಲಿ ಎಸ್‌ಜೆಎಮ್ ರೇಂಜ್ ಕಾನ್ಫರೆನ್ಸ್ ಸಂಪನ್ನ

ಬೆಳ್ತಂಗಡಿ: ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್‌ಜೆಎಮ್ ಉಪ್ಪಿನಂಗಡಿ ರೇಂಜ್ 140ರ ವತಿಯಿಂದ ಜೂ.17 ರಂದು ಹಿಮಾಯತುಲ್ ಇಸ್ಲಾಂ ಮದ್ರಸ ಹೊಸಮಜಲುವಿನಲ್ಲಿ ರೇಂಜ್ ಕಾನ್ಫರೆನ್ಸ್ ನಡೆಯಿತು.

ಕಾರ್ಯಕ್ರಮಕ್ಕೆ ಉಪ್ಪಿನಂಗಡಿ ರೇಂಜ್ ಅಧ್ಯಕ್ಷ ಡಿ.ಹೆಚ್ ಇಬ್ರಾಹಿಂ ಸಅದಿ ನೆಕ್ಕಿಲಾಡಿ ಅಧ್ಯಕ್ಷತೆ ವಹಿಸಿದ್ದರು. ಸತ್ತಾರ್ ಹಿಶಾಮಿ ಉಸ್ತಾದ್ ಖಿರಾಅತ್ ನೆರವೇರಿಸಿದರು. ಹೊಸಮಜಲು ಖತೀಬ್ ಮುಹಮ್ಮದ್ ಶಂಸೀರ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿದರು.

ಫಿರೋಝ್ ಸಅದಿ ಸ್ವಾಗತಿಸಿದರು. ಬಳಿಕ ಮುಹಮ್ಮದ್ ರಫೀಖ್ ಅಹ್ಸನಿ ನೆಕ್ಕಿಲಾಡಿ 6ನೇ ತರಗತಿಯ ತಝ್ಕಿಯಾ ಪಾಠ-5 ಕುರಿತ ಹಾಗೂ ಇಸ್ಮಾಯಿಲ್ ಸಅದಿ ನೆಲ್ಯಾಡಿ ಅವರು 8ನೇ ತರಗತಿ ತಝ್ಕಿಯಾ ಪಾಠ-4 ಕುರಿತು ಪಾಠ ನಡೆಸಿ ಚರ್ಚೆ ಕೈಗೊಂಡರು.

9ನೇ ತರಗತಿ ದುರೂಸ್ 1, 2 ಹಾಗೂ 3 ಪಾಠಗಳನ್ನು ಆಧರಿಸಿ ಕ್ವಿಝ್ ಸ್ಪರ್ಧೆಯನ್ನು ಶರೀಫ್ ಸಅದಿ ನೆಕ್ಕಿಲಾಡಿ ನಡೆಸಿಕೊಟ್ಟರು.

ಮುಹಮ್ಮದ್, ಎಂ.ಕೆ ಇಬ್ರಾಹಿಂ ಹಾಗೂ ಇಬ್ರಾಹಿಂ ಖಲೀಲ್ ಉಸ್ತಾದ್ ಆಶಂಸ ಭಾಷಣ ಮಾಡಿದರು. ಅಬ್ದುಲ್ ಲತೀಫ್ ಸಖಾಫಿ ಕರ್ವೇಲ್ ಅವರು “ಹೊಸ ವರ್ಷ – ಹೊಸ ಹರುಷ” ವಿಷಯದ ಕುರಿತು ಪ್ರಬಂಧ ಮಂಡಿಸಿದರು.

ಮುಹಮ್ಮದ್ ರಾಶೀದ್ ಮದನಿ ನೆಲ್ಯಾಡಿ ನ್ಯೂಸ್ ರೀಡಿಂಗ್ ನಡೆಸಿದರೆ, ಅನ್ಸಿಫ್ ಸಅದಿ ಮೊರಂಕಳ ಆಲಾಪಣೆ ನಡೆಸಿದರು. ಕೊನೆಯಲ್ಲಿ ಅಬ್ದುಲ್ ಜಬ್ಬಾರ್ ಝೈನಿ ಕರ್ವೇಲು ಧನ್ಯವಾದ ಅರ್ಪಿಸಿದರು.

ರೇಂಜ್ ವ್ಯಾಪ್ತಿಯ ಮುಅಲ್ಲಿಮರು ಮತ್ತು ಸಂಬಂಧಿತ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹೊಸಮಜಲು ಎಸ್‌ಬಿಎಸ್ ವತಿಯಿಂದ ಉಸ್ತಾದರಿಗೆ ಸ್ಮರಣಿಕೆ ಹಾಗೂ ಕೊಡುಗೆ ನೀಡಿ ಗೌರವಿಸಲಾಯಿತು. ಬಗೆಬಗೆಯ ತಿಂಡಿ ವ್ಯವಸ್ಥೆಯನ್ನು ಊರವರು ಸಂಯೋಜಿಸಿದ್ದರು.

Related posts

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya
error: Content is protected !!