September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ ಜೂ.16ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪ ಪ್ರಾಂಶುಪಾಲೆ ಸುಜಾತ ಭಟ್ ಉದ್ಘಾಟಿಸಿ ಮಾತನಾಡಿದರು.

ಯೋಗವೆನ್ನುವುದು ಇಂದು ನಿನ್ನೆಯದಲ್ಲ. ಇದು ಋಗ್ವೇದ ಕಾಲದಲ್ಲಿಯೂ ಇತ್ತು. ಋಷಿಮುನಿಗಳು ಇದಕ್ಕೆ ಮಹತ್ವ ಕೊಡುತ್ತಿದ್ದರು. ಯಾವುದೇ ರೋಗರುಜಿನ ಯೋಗದಿಂದ ಗುಣವಾದ ಉದಾಹರಣೆಗಳು ಇದೆ. ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಬಹಳ ಉತ್ತಮ ಮಾರ್ಗ ಎಂದರು.

ಹಿರಿಯ ಶಿಕ್ಷಕ ಚಂದ್ರಶೇಖರ್ ಭಟ್ ಮಾತನಾಡಿ, ಯೋಗಾಭ್ಯಾಸದಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಓದಿನ ಕಡೆಗೆ ಆಸಕ್ತಿ ಹೆಚ್ಚುತ್ತದೆ. ಆತ್ಮವಿಶ್ವಾಸ ಬೆಳೆಯುತ್ತದೆ ಎಂದರು. ಮುಖ್ಯೋಪಾಧ್ಯಾಯಿನಿ ವಿದ್ಯಾ ಟಿ. ಅಧ್ಯಕ್ಷತೆ ವಹಿಸಿದ್ದರು.

ಯೋಗ ತರಬೇತುದಾರರು, ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಾಂಜಲಿ ಪುನೀತ್ ಮತ್ತು ವ್ಯಟ್ರಿ ವೆಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಕನಕಶ್ರೀ ಸ್ವಾಗತಿಸಿ, ಶ್ವೇತಾ ವಂದಿಸಿ, ಅನನ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ಬಂದಾರು: ಮತಪ್ರಚಾರ ಮಹಾ ಅಭಿಯಾನ

Suddi Udaya

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಹಿಳಾ ಶಕ್ತಿ ಸಂಘ ರಚನೆ

Suddi Udaya
error: Content is protected !!