September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳ ಅಭಿಯಾನ ಶಿಬಿರ

ಗೇರುಕಟ್ಟೆ : ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಹಸುಗಳ ಅಭಿಯಾನ ಮಾಹಿತಿ ಶಿಬಿರ ಜೂ.16 ರಂದು ಸಂಘದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಕೇಶವ ಪೂಜಾರಿ ಪಿ ನಾಳ ಇವರ ಮುತುವರ್ಜಿಯಲ್ಲಿ ನಡೆಯಿತು. ಶಿಬಿರದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಇದರ ತಾಲ್ಲೂಕುವಾರು ಉಪ ವ್ಯವಸ್ಥಾಪಕರುಗಳಾದ ಡಾ. ಡಿ.ಆರ್ ಸತೀಶ್ ರಾವ್ ಸೂಕ್ತ ಸಲಹೆಗಳನ್ನು ಹೈನುಗಾರರಿಗೆ ನೀಡಿದರು. ಉಪ ವ್ಯವಸ್ಥಾಪಕ ಡಾ. ಗಣಪತಿ ಮಾಂಗ ಇವರು ಹಸುಗಳ ಬಂಜೆತನ ನೀವಾರಿಸಲು ಕೆಲವು ಸುಲಭವಾಗಿ ಸಿಗುವ ಹಳ್ಳಿ ಮದ್ದುಗಳನ್ನು ರೈತರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಸ್ತರಣಾಧಿಕಾರಿಗಳಾದ ರಾಜೇಶ್ ಪಿ ಕೆ ಮತ್ತು ಸಂದೀಪ್ ಭಾಗವಹಿಸಿದರು. ಈ ಅಭಿಯಾನ ಸಂಘದ ಸದಸ್ಯರು ಅದ ಜಯಚಂದ್ರ ಮುಂಚಲ್ಲಕ್ಕಿ ಮತ್ತು ರೋನಾಲ್ಡ್ ಮೋನಿಸ್ ಇವರ ಮನೆಯಲ್ಲಿ ಕೂಡ ನಡೆಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸೋಮಪ್ಪ ಗೌಡ, ನಿರ್ದೇಶಕರುಗಳಾದ ಸುಧಾಕರ ಮಜಲು, ಬಾಲಕೃಷ್ಣ ಶೆಟ್ಟಿ, ವಿಠಲ ಗೌಡ ಪಿ, ಜಗದೀಶ್ ಪೂಜಾರಿ, ಬೊಮ್ಮಣ ಗೌಡ, ರಮೇಶ ಶೆಟ್ಟಿ, ಶ್ರೀಧರ ಪೂಜಾರಿ, ಶ್ರೀಮತಿ ರೀತಾ ಪಿ ನಾಳ,ಶ್ರೀಮತಿ ವಿಜಯಾ ಮತ್ತು ಸಂಘದ ಕಾರ್ಯದರ್ಶಿ ಶ್ರೀಮತಿ ಸೌಮ್ಯ ಎಂ ಹಾಗೂ ಸಿಬ್ಬಂದಿ ವರ್ಗ ಕೆ ವೆಂಕಪ್ಪ ಪೂಜಾರಿ, ಸವಿತಾ ಉಪಸ್ಥಿತರಿದ್ದರು.

Related posts

ಮಂಗಳೂರು ರಾಜ್ಯ ಸಚಿವ ಸಂಪುಟ ಸಭೆಯ ಪೂರ್ವಭಾವಿ ಸಭೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಸ್ಮಾರ್ಟ್ ಕಾರ್ಡ್ ಬಳಕೆಯ ಮಾಹಿತಿ ಕಾರ್ಯಗಾರ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya
error: Content is protected !!