29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳ ಅಭಿಯಾನ ಶಿಬಿರ

ಗೇರುಕಟ್ಟೆ : ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಹಸುಗಳ ಅಭಿಯಾನ ಮಾಹಿತಿ ಶಿಬಿರ ಜೂ.16 ರಂದು ಸಂಘದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಕೇಶವ ಪೂಜಾರಿ ಪಿ ನಾಳ ಇವರ ಮುತುವರ್ಜಿಯಲ್ಲಿ ನಡೆಯಿತು. ಶಿಬಿರದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಇದರ ತಾಲ್ಲೂಕುವಾರು ಉಪ ವ್ಯವಸ್ಥಾಪಕರುಗಳಾದ ಡಾ. ಡಿ.ಆರ್ ಸತೀಶ್ ರಾವ್ ಸೂಕ್ತ ಸಲಹೆಗಳನ್ನು ಹೈನುಗಾರರಿಗೆ ನೀಡಿದರು. ಉಪ ವ್ಯವಸ್ಥಾಪಕ ಡಾ. ಗಣಪತಿ ಮಾಂಗ ಇವರು ಹಸುಗಳ ಬಂಜೆತನ ನೀವಾರಿಸಲು ಕೆಲವು ಸುಲಭವಾಗಿ ಸಿಗುವ ಹಳ್ಳಿ ಮದ್ದುಗಳನ್ನು ರೈತರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಸ್ತರಣಾಧಿಕಾರಿಗಳಾದ ರಾಜೇಶ್ ಪಿ ಕೆ ಮತ್ತು ಸಂದೀಪ್ ಭಾಗವಹಿಸಿದರು. ಈ ಅಭಿಯಾನ ಸಂಘದ ಸದಸ್ಯರು ಅದ ಜಯಚಂದ್ರ ಮುಂಚಲ್ಲಕ್ಕಿ ಮತ್ತು ರೋನಾಲ್ಡ್ ಮೋನಿಸ್ ಇವರ ಮನೆಯಲ್ಲಿ ಕೂಡ ನಡೆಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸೋಮಪ್ಪ ಗೌಡ, ನಿರ್ದೇಶಕರುಗಳಾದ ಸುಧಾಕರ ಮಜಲು, ಬಾಲಕೃಷ್ಣ ಶೆಟ್ಟಿ, ವಿಠಲ ಗೌಡ ಪಿ, ಜಗದೀಶ್ ಪೂಜಾರಿ, ಬೊಮ್ಮಣ ಗೌಡ, ರಮೇಶ ಶೆಟ್ಟಿ, ಶ್ರೀಧರ ಪೂಜಾರಿ, ಶ್ರೀಮತಿ ರೀತಾ ಪಿ ನಾಳ,ಶ್ರೀಮತಿ ವಿಜಯಾ ಮತ್ತು ಸಂಘದ ಕಾರ್ಯದರ್ಶಿ ಶ್ರೀಮತಿ ಸೌಮ್ಯ ಎಂ ಹಾಗೂ ಸಿಬ್ಬಂದಿ ವರ್ಗ ಕೆ ವೆಂಕಪ್ಪ ಪೂಜಾರಿ, ಸವಿತಾ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

Suddi Udaya

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!