ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಗುರುವಾಯನಕೆರೆ ವರಕಬೆ ಬಳಿ ಎರಡು ಕಾರು ಹಾಗೂ ಬೈಕ್ ನ ನಡುವೆ ಸರಣಿ ಅಪಘಾತವಾದ ಘಟನೆ ಇಂದು (ಜೂ.17 ) ಮಧ್ಯಾಹ್ನ ನಡೆದಿದೆ.



ಮಂಗಳೂರಿನಿಂದ ಬರುತಿದ್ದ ಕಾರೊಂದು ಎದುರಿನಿಂದ ಬರುತಿದ್ದ ಕಾರು ಹಾಗೂ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿ ಮತ್ತೊಂದು ಕಾರು ನಜ್ಜುಗುಜ್ಜಾಗಿದೆ.













