ಮುಂಡೂರು: ಶ್ರೀ ಮಂಗಳಗಿರಿ ದೇವಸ್ಥಾನ ಮುಂಡೂರು ಇದರ ವತಿಯಿಂದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕೊಡೆ ವಿತರಣೆ ಕಾರ್ಯಕ್ರಮ ಜರುಗಿತು.
ಮಂಗಳಗಿರಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ರಾಜೀವ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೀವ್ ಸಾಲ್ಯಾನ್, ಶಾರಾದಾಂಭ ಯುವಕ ಮಂಡಲದ ಅಧ್ಯಕ್ಷ ರಮಾನಂದ ಸಾಲಿಯಾನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೇಶವ ಕುಲಾಲ್, ಸಪ್ತಶ್ರೀ ಇಲೆಕ್ಟ್ರಿಕಲ್ಸ್ ಗುರುವಾಯನಕೆರೆಯ ಜಯರಾಜ್ ಬಂಗೇರ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶ್ರೀಮತಿ ಪ್ರತಿಭಾ, ಶಾಲಾ ಮುಖ್ಯೋಪಾಧ್ಯಾಯ ಕಲ್ಲೇಶ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.













