24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಎಲ್ಲಾ ಸಂಘಗಳ ಉದ್ಘಾಟನಾ ಸಮಾರಂಭ ನೆರವೇರಿತು.

ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ ಭಟ್ ದೀಪ ಪ್ರಜ್ವಲಿಸಿ ಸಂಘಗಳ ಕಾರ್ಯಗಳಿಗೆ ಚಾಲನೆ ನೀಡಿದರು. ಬಳಿಕ ಶಾಲೆಯ ಒಟ್ಟು ಹತ್ತು ಸಂಘಗಳು ತಮ್ಮ ವಾರ್ಷಿಕ ಯೋಜನೆಗಳನ್ನು ನಾಟಕ, ನೃತ್ಯ, ಕಥೆ, ಕವನ, ಹಾಡು ಇತ್ಯಾದಿ ವಿವಿಧ ಕಲಾಪ್ರಕಾರದ ರೂಪದಲ್ಲಿ ಪ್ರಸ್ತುತಪಡಿಸಿದರು.

ಅತಿಥಿಯಾಗಿ ಆಗಮಿಸಿದ್ದ ಡಾ. ಶ್ರೀಧರ ಭಟ್ ಅವರು ವಿವಿಧ ಸಂಘಗಳ ಯೋಚನೆಗಳನ್ನು ನೋಡಿ ಸಂತಸ ಪಟ್ಟರು.ವಿದ್ಯೆಯ ಮಹತ್ವ,ವಿದ್ಯಾರ್ಥಿಗಳ ಜೀವನದ ಮಹತ್ವ ಮತ್ತು ಅದು ಹೇಗಿರಬೇಕು,ಅಲ್ಪ ಆಹಾರದ ಮಹತ್ವ,ಪರಿಶ್ರಮ ಪಡಬೇಕಾದ ರೀತಿ, ಗುರಿ ಹಾಗೂ ಅದನ್ನು ತಲುಪುವ ದಾರಿ. ಪ್ರಾರ್ಥನೆಯ ಹಿಂದಿನ ಶಕ್ತಿ.ಪರಿಶ್ರಮ ಪಡಬೇಕಾದ ಅಗತ್ಯ, ಅವಕಾಶಗಳ ಸದುಪಯೋಗ, ಸ್ಪರ್ಧಾ ಜಗತ್ತಿನಲ್ಲಿ ವಿದ್ಯಾರ್ಥಿಗಳ ಜೀವನದಲ್ಲಿ ಸಂಘಗಳ ಮಹತ್ವ,ಅದನ್ನು ಉಪಯೋಗಿಸಿಕೊಳ್ಳುವ ರೀತಿ ಇತ್ಯಾದಿಗಳನ್ನು ಹಲವಾರು ಉದಾಹರಣೆಗಳ ಮುಖಾಂತರ ಮಾರ್ಮಿಕವಾಗಿ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಾಕ್ಷಿಗಳಾದರು.

Related posts

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya
error: Content is protected !!