29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು: ಪೊಮ್ಮಾಜೆ ಜನರಿಗೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾದ ಏರ್‌ಟೆಲ್ ಹಾಗೂ ಬಿಎಸ್‌ಎನ್‌ಎಲ್ ಟವರ್

ಬೆಳ್ತಂಗಡಿ : ಸೋಣಂದೂರು ಗ್ರಾಮದ ಪೂಮ್ಮಾಜೆ ಇಲ್ಲಿನ ನಾಗರಿಕರ ಹೆಚ್ಚಿನ ಸಮಸ್ಯೆ ಎಂದರೆ ಮೊಬೈಲ್ ನೆಟ್ವರ್ಕ್.
ಪೂಮ್ಮಾಜೆ- ಪಣಕಜೆ ಭಾಗದಲ್ಲಿ ಏರ್‌ಟೆಲ್ ಹಾಗೂ ಬಿಎಸ್‌ಎನ್‌ಎಲ್ ಮೂರು ಟವರ್ ಗಳಿದ್ದರೂ ಜನತೆಗೆ ಯಾವ ಪ್ರಯೋಜನಕ್ಕೂ ಇಲ್ಲದಂತಾಗಿದೆ. ಗ್ರಾಹಕರು ಈ ಟವರ್ಗಳ ಅಡಿಯಲ್ಲಿ ನಿಂತರೂ ನೆಟ್ವರ್ಕ್ ಸಿಗದಿರುವುದು ವಿಶ್ವದ ವಿಚಿತ್ರ ಸಂಗತಿಗಳಲ್ಲಿ ಒಂದು.

ಉದ್ಯೋಗಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಅಧ್ಯಾಪಕರಿಗೆ ಈ ನೆಟ್ವರ್ಕ್ ಸಮಸ್ಯೆಯಿಂದ ಆಗುವ ತೊಂದರೆ ಅಷ್ಟಿಷ್ಟಲ್ಲ. ಆನ್ಲೈನ್ ನಲ್ಲಿ ಆರ್ಡರ್ ಮಾಡಿದ ವಸ್ತುಗಳನ್ನು ಡೆಲಿವೆರಿ ಬಾಯ್ ಗಳು ತಗೊಂಡು ಬಂದು ಆರ್ಡರ್ ಮಾಡಿದವರಿಗೆ ತಲುಪಿಸೋಣ ಅಂದ್ರೆ ಮನೆಯ ಮುಂಭಾಗಕ್ಕೆ ಬಂದರೂ ನೆಟ್ವರ್ಕ್ ಇಲ್ಲಾ. ಇನ್ನು ಸಂಬಂಧಪಟ್ಟ ಕಂಪನಿಯ ಅಧಿಕಾರಿಗಳಿಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಪೋಮ್ಮಾಜೆಯ ಆಸುಪಾಸಿನ ನಾಗರಿಕರಿಗೆ ಆಗುವ ಈ ತೊಂದರೆಯನ್ನು ಆದಷ್ಟು ಬೇಗ ನಿವಾರಿಸುವಂತೆ ಒತ್ತಾಯಿಸಲಾಗಿದೆ.
-ಯಸ್. ರಿಯಾಝ್

Related posts

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ: ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ, ನವಕ ಕಲಶಾಭಿಷೇಕ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya
error: Content is protected !!