August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು: ಪೊಮ್ಮಾಜೆ ಜನರಿಗೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾದ ಏರ್‌ಟೆಲ್ ಹಾಗೂ ಬಿಎಸ್‌ಎನ್‌ಎಲ್ ಟವರ್

ಬೆಳ್ತಂಗಡಿ : ಸೋಣಂದೂರು ಗ್ರಾಮದ ಪೂಮ್ಮಾಜೆ ಇಲ್ಲಿನ ನಾಗರಿಕರ ಹೆಚ್ಚಿನ ಸಮಸ್ಯೆ ಎಂದರೆ ಮೊಬೈಲ್ ನೆಟ್ವರ್ಕ್.
ಪೂಮ್ಮಾಜೆ- ಪಣಕಜೆ ಭಾಗದಲ್ಲಿ ಏರ್‌ಟೆಲ್ ಹಾಗೂ ಬಿಎಸ್‌ಎನ್‌ಎಲ್ ಮೂರು ಟವರ್ ಗಳಿದ್ದರೂ ಜನತೆಗೆ ಯಾವ ಪ್ರಯೋಜನಕ್ಕೂ ಇಲ್ಲದಂತಾಗಿದೆ. ಗ್ರಾಹಕರು ಈ ಟವರ್ಗಳ ಅಡಿಯಲ್ಲಿ ನಿಂತರೂ ನೆಟ್ವರ್ಕ್ ಸಿಗದಿರುವುದು ವಿಶ್ವದ ವಿಚಿತ್ರ ಸಂಗತಿಗಳಲ್ಲಿ ಒಂದು.

ಉದ್ಯೋಗಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಅಧ್ಯಾಪಕರಿಗೆ ಈ ನೆಟ್ವರ್ಕ್ ಸಮಸ್ಯೆಯಿಂದ ಆಗುವ ತೊಂದರೆ ಅಷ್ಟಿಷ್ಟಲ್ಲ. ಆನ್ಲೈನ್ ನಲ್ಲಿ ಆರ್ಡರ್ ಮಾಡಿದ ವಸ್ತುಗಳನ್ನು ಡೆಲಿವೆರಿ ಬಾಯ್ ಗಳು ತಗೊಂಡು ಬಂದು ಆರ್ಡರ್ ಮಾಡಿದವರಿಗೆ ತಲುಪಿಸೋಣ ಅಂದ್ರೆ ಮನೆಯ ಮುಂಭಾಗಕ್ಕೆ ಬಂದರೂ ನೆಟ್ವರ್ಕ್ ಇಲ್ಲಾ. ಇನ್ನು ಸಂಬಂಧಪಟ್ಟ ಕಂಪನಿಯ ಅಧಿಕಾರಿಗಳಿಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಪೋಮ್ಮಾಜೆಯ ಆಸುಪಾಸಿನ ನಾಗರಿಕರಿಗೆ ಆಗುವ ಈ ತೊಂದರೆಯನ್ನು ಆದಷ್ಟು ಬೇಗ ನಿವಾರಿಸುವಂತೆ ಒತ್ತಾಯಿಸಲಾಗಿದೆ.
-ಯಸ್. ರಿಯಾಝ್

Related posts

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

Suddi Udaya

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ಉಜಿರೆ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಚಿಣ್ಣರ ಯೋಗ ಶಿಬಿರ ಉದ್ಘಾಟನೆ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya
error: Content is protected !!