27.7 C
ಪುತ್ತೂರು, ಬೆಳ್ತಂಗಡಿ
June 18, 2026
ತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಉಜಿರೆ: ಅನುಗ್ರಹ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ನೂತನ ವಿದ್ಯಾರ್ಥಿ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂ.18 ರಂದು ಅನುಗ್ರಹ ಶಾಲಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಶ್ರೀನಿವಾಸ್ , ಪಿಡಿಓ ಗ್ರಾಮ  ಪಂಚಾಯಿತ್ ಮಡಂತ್ಯಾರ್ , ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ಮಂತ್ರಿಮಂಡಲದ ಸದಸ್ಯರಿಗೆ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ. ವಿಜಯ್ ಲೋಬೊ ಅವರು ಪ್ರಮಾಣ ವಚನ ಬೋಧಿಸಿದರು.

ವಿದ್ಯಾರ್ಥಿ ಮಂತ್ರಿಮಂಡಲದಲ್ಲಿ ಕಾಲೇಜು ವಿಭಾಗದ ಅಧ್ಯಕ್ಷರಾಗಿ ನೀರಜ್ ಎಂ, ಕಾರ್ಯದರ್ಶಿಯಾಗಿ ಅಫ್ರಿನಾ, ಪ್ರೌಢಶಾಲಾ ವಿದ್ಯಾರ್ಥಿ ನಾಯಕನಾಗಿ ಗಗನ್ ಡಿ., ಉಪನಾಯಕಿಯಾಗಿ ರಿಶಲ್ ಫೆರ್ನಾಂಡಿಸ್, ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕನಾಗಿ ವಾಟ್ಸನ್ ಮೋನಿಸ್, ಉಪನಾಯಕಿಯಾಗಿ ರಕ್ಷಾ ಪಂಡಿತ್ ಹಾಗೂ ಇತರ ಮಂತ್ರಿಮಂಡಲ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿ ತಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವಹಿಸುವ ಸಂಕಲ್ಪ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ ಅವರು, ಯುವ ನಾಯಕತ್ವದಲ್ಲಿ ಜವಾಬ್ದಾರಿ, ಸೇವಾ ಮನೋಭಾವ, ಶಿಸ್ತು ಮತ್ತು ರಾಷ್ಟ್ರಪ್ರೇಮದ ಮೌಲ್ಯಗಳು ಅಡಕವಾಗಿದ್ದು, ಇವುಗಳನ್ನು ಅಳವಡಿಸಿಕೊಂಡು ಇಂದಿನ ಯುವಪೀಳಿಗೆ ಬೆಳೆಯಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾದ ಮಡಂತ್ಯಾರ್ ಗ್ರಾಮ ಪಂಚಾಯಿತಿನ ಪಿಡಿಓ ಆಗಿರುವ ಶ್ರೀನಿವಾಸ್  ಅವರು, ಶಾಲಾ ಮಂತ್ರಿಮಂಡಲವು ಪ್ರಜಾಪ್ರಭುತ್ವ ವ್ಯವಸ್ಥೆಯ ಒಂದು ಉತ್ತಮ ಮಾದರಿಯಾಗಿದ್ದು, ಇದು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಜವಾಬ್ದಾರಿತನ, ಸಹಕಾರ ಮನೋಭಾವ ಹಾಗೂ ಶಿಸ್ತಿನ ಅರಿವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಪ್ರಾಂಶುಪಾಲರಾದ ವಂದನೀಯ ಫಾ. ಡಾ.ವಿಜಯ್ ಲೋಬೊ ಅವರು ನೂತನ ಮಂತ್ರಿಮಂಡಲದ ಸದಸ್ಯರಿಗೆ ತಮ್ಮ ಕರ್ತವ್ಯಗಳು, ಜವಾಬ್ದಾರಿಗಳು ಹಾಗೂ ನಾಯಕತ್ವದ ಮೌಲ್ಯಗಳ ಕುರಿತು ಮಾರ್ಗದರ್ಶನ ನೀಡಿದರು. ಜೊತೆಗೆ ಪ್ರಮಾಣ ವಚನ ಸ್ವೀಕರಿಸಿದ ಎಲ್ಲ ಸದಸ್ಯರಿಗೆ ಶುಭ ಹಾರೈಸಿದರು.

ಸಹಶಿಕ್ಷಕಿ ವಿನಯಲತಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ನಿಶ್ಚಿತ್, ಭರತ್ ಹಾಗೂ ಶಾಲೆಯ ಸಹಶಿಕ್ಷಕರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ಫುಟ್ಬಾಲ್ ಪಂದ್ಯಾಟ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya
error: Content is protected !!