September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್‌ನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿಗಳಿಗೆ

ಗುರುವಾಯನಕೆರೆ: ಭಾರತದ ಅತ್ಯುನ್ನತ ಎಂಜಿನಿಯರಿಂಗ್ ಕಾಲೇಜುಗಳಾದ ಐಐಟಿ, ಎನ್ಐಟಿ, ಐಐಐಟಿ ಮತ್ತಿತರ ಜಿಎಫ್‌ಟಿ ಸಂಸ್ಥೆಗಳ ಜಂಟಿ ಸೀಟು ಹಂಚಿಕೆ ಪ್ರಕ್ರಿಯೆಯನ್ನು ನಿರ್ವಹಿಸುವ ಕೇಂದ್ರ ಶಿಕ್ಷಣ ಸಚಿವಾಲಯದ ಅಂಗವಾಗಿರುವ ಜಂಟಿ ಸೀಟು ಹಂಚಿಕೆ ಪ್ರಾಧಿಕಾರದ (JoSAA) ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯ ಹಲವು ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ.

ಹರ್ಷಿತ ಎಸ್ ಐಐಟಿ ದೆಹಲಿ, ವಿನಯ ಕೆ ಸಜ್ಜನರ್ ಎನ್‌ಐಟಿ ವಾರಂಗಲ್, ಕೆ. ಕೆ. ಸರ್ವಿಕ ಐಐಟಿ ಧಾರವಾಡ, ರೋಹಿತ್ ಆ‌ರ್. ಎಲ್ ಐಐಟಿ ಧಾರವಾಡ, ಸಮ್ಯಕ್ ವಿನಯ್ ಎನ್‌ಐಟಿಕೆ ಸುರತ್ಕಲ್, ಅಕ್ಷಯ್ ಎ ಎನ್‌ಐಟಿಕೆ ಸುರತ್ಕಲ್, ಶಶಾಂಕ ಗೌಡ ಎನ್‌ಐಟಿಕೆ ಸುರತ್ಕಲ್, ಸ್ವಸ್ತಿಕ್ ಎ ಜೈನ್ ಎನ್‌ಐಟಿಕೆ ಸುರತ್ಕಲ್, ತೇಜಲ್ ವಿ ವಂಟಕರ್ ಎನ್‌ಐಟಿಕೆ ಸುರತ್ಕಲ್, ಅಭಿನವ್ ಕೆ ಮಯ್ಯ ಎನ್‌ಐಟಿಕೆ ಸುರತ್ಕಲ್, ಯಶಸ್ ಗೌಡ ಎನ್ ಎನ್‌ಐಟಿ ರೌರ್ಕೆಲ, ಪೂರ್ವಿಕ ಜೆ ಎನ್‌ಐಟಿ ರಾಯ್‌ಪುರ, ಸಂಸ್ಥೆಗಳಿಗೆ ಆಯ್ಕೆಯಾಗಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಎಕ್ಸೆಲ್ ಪದವಿಪೂರ್ವ ಕಾಲೇಜಿನಿಂದ ಮೂರು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿ, ಎನ್‌ಐಟಿ, ಐಐಐಟಿ, ಐಐಎಸ್‌ಸಿ ಸೇರಿ ಭಾರತದ ಉತ್ಕೃಷ್ಟ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವುದು ಸಂಸ್ಥೆಯ ಗುಣಮಟ್ಟಕ್ಕೆ ಹಿಡಿದ ಕೈಗನ್ನಡಿಯೆಂದು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್‌ಕುಮಾರ್ ಜೈನ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya
error: Content is protected !!