27.7 C
ಪುತ್ತೂರು, ಬೆಳ್ತಂಗಡಿ
June 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎನ್‌ಡಿಆರ್‌ಎಫ್ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ವತಿಯಿಂದ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಮುಖ್ಯ ಅತಿಥಿಗಳಾಗಿ ಎನ್‌ಡಿಆರ್‌ಎಫ್ ತಂಡದ ಕಮಾಂಡರ್ ಶಾಂತಿಲಾಲ್ ಜಟಿಯಾ, ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ ಸುಭಾಷ್ ಸಿಂಧೆ ಹಾಗೂ ರಕ್ಷಕರಾದ ಚಂದ್ರಶೇಖರ್ ರೆಡ್ಡಿ, ಬಾಲಕೃಷ್ಣ ಮತ್ತು ವಿ. ಶ್ರೀನಿವಾಸಲು ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ ಸುಭಾಷ್ ಸಿಂಧೆ ಅವರು ಭೂಕಂಪದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಜನಸಂದಣಿಯ ನೂಕುನುಗ್ಗಲಿನಿಂದ ಪಾರಾಗುವ ವಿಧಾನಗಳು, ಪ್ರಥಮ ಚಿಕಿತ್ಸೆ, ಗಂಟಲಲ್ಲಿ ಆಹಾರ ಅಥವಾ ಇತರ ವಸ್ತು ಸಿಲುಕಿದಾಗ ನೀಡಬೇಕಾದ ತುರ್ತು ನೆರವು, ಸಿಪಿಆರ್ (CPR), ಕುಸಿದ ಕಟ್ಟಡಗಳ ರಕ್ಷಣಾ ಕಾರ್ಯಾಚರಣೆ ಹಾಗೂ ನೀರಿನಲ್ಲಿ ಮುಳುಗುವವರ ರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ.ಆರ್. ಅವರ ಮಾರ್ಗದರ್ಶನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ವಿಜ್ಞಾನ ಸಂಘ ಹಾಗೂ ಗಣಿತ ಸಂಘಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ, ವಿಜ್ಞಾನ ಸಂಘದ ಸದಾನಂದ ಎ., ಶ್ರೀಮತಿ ನಯನ ಹಾಗೂ ಸ್ಕೌಟ್-ಗೈಡ್ ಶಿಕ್ಷಕರಾದ ಮಂಜುನಾಥ್, ನೀತಾ ಕೆ.ಎಸ್., ಜಯರಾಮ್, ಜಯಲಕ್ಷ್ಮಿ, ಗೀತಾ ಪಿ., ರಮ್ಯಾ ಬಿ.ಎಸ್., ಪ್ರಮೀಳಾ ಎನ್., ಅಮಿತಾ ಸಮತಾ, ಸೌಮ್ಯಾ ಪಿ., ಪುಷ್ಪಲತಾ ಮತ್ತು ಮೋಹಿನಿ ಅವರು ಸಹಕರಿಸಿದರು.


ಕಬ್ ಮಾಸ್ಟರ್ ನೀತಾ ಕೆ ಎಸ್ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ನ.29 ರಂದು ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ: ಸುಮಾರು 7ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರ ನಾನಾ ಕ್ರಮ ಹಾಗೂ ಬೇಡಿಕೆಗಳು ಹಾಗೂ ಅಂಶಗಳನ್ನು ಬೆಳೆಗಾರರ ಪರವಾಗಿ ಸರಕಾರಗಳ ಮುಂದಿಟ್ಟು ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶ

Suddi Udaya
error: Content is protected !!