August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

ಬೆಳ್ತಂಗಡಿ: ರೋಟರಿ ಕ್ಲಬ್, ಭಾರತೀಯ ದಂತ ವೈದ್ಯ ಸಂಘ ಮತ್ತು ಆಯುಷ್ ಫೆಡರೇಶನ್ ಆಫ್ ಇಂಡಿಯಾದ ಸಹಯೋಗದಲ್ಲಿ ಡೋಂಗ್ರೆ ಕುಟುಂಬಸ್ಥರು ಕೊಡಮಾಡುವ 18ನೇ ವರ್ಷದ ಶಾಲಾ ಶೈಕ್ಷಣಿಕ ಪರಿಕರಗಳ ವಿತರಣಾ ಸಮಾರಂಭವು ಜೂ. 17ರಂದು ಸೂಳಬೆಟ್ಟು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಅತಿಥಿಗಳಾಗಿದ್ದ ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷ ಶ್ರೀಧರ ಕೆ.ವಿ., ಕಾರ್ಯದರ್ಶಿ ಡಾ. ರಾಘವೇಂದ್ರ ಪಿದಮಲೆ ಮತ್ತು ಡಾ. ಮುಕ್ತಾ ಪಟವರ್ಧನ್ ಅವರು ಶಾಲಾ ಹಾಗೂ ಅಂಗನವಾಡಿ ಮಕ್ಕಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಿದರು. ದಾನಿಗಳಾದ ಡಾ. ಶಶಿಧರ ಡೋಂಗ್ರೆ ಕಾರ್ಯಕ್ರಮ ಉದ್ಘಾಟಿಸಿದರು. ಡಾ. ಸುಷ್ಮಾ ಡೋಂಗ್ರೆ, ಡಾ. ಮನೀಷ್ ಡೋಂಗ್ರೆ ಮತ್ತು ಬಳಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ವಿಶ್ವನಾಥ ಡೋಂಗ್ರೆ ಅವರು ಉಪಸ್ಥಿತರಿದ್ದರು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರವೀಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಕ್ಕಳಿಗೆ ಬರೆಯುವ ಪುಸ್ತಕ, ಸಮವಸ್ತ್ರ, ಬ್ಯಾಗ್, ಕೊಡೆ, ಪೆನ್ನು, ಪೆನ್ಸಿಲ್, ಪೇಸ್ಟ್ ಮತ್ತಿತರ ಪರಿಕರಗಳನ್ನು ವಿತರಿಸಲಾಯಿತು.

ಇದೇ ವೇಳೆ, ಜೆ.ಇ.ಇ. ಮೈನ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸೂಳಬೆಟ್ಟಿನ ಪ್ರಥಮ ಗೋಖಲೆ ಮತ್ತು ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಅಳದಂಗಡಿಯ ಸಾಕ್ಷಿ ಅವರನ್ನು ಅಭಿನಂದಿಸಿ, ಡೋಂಗ್ರೆ ಕುಟುಂಬಸ್ಥರು ಆರ್ಥಿಕ ಸಹಾಯ ನೀಡಿ ಪ್ರೋತ್ಸಾಹಿಸಿದರು.

ಶಿಕ್ಷಕಿ ರೀಟಾ ರೋಡ್ರಿಗಸ್, ಅಂಗನವಾಡಿ ಕಾರ್ಯಕರ್ತೆ ಶಕುಂತಲಾ, ಅಕ್ಷರ ದಾಸೋಹದ ಲವಿನಾ ಮತ್ತು ಚಿತ್ರಾಕ್ಷಿ ಅವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಲೀನಾ ಮೊರಾಸ್ ಸ್ವಾಗತಿಸಿ, ವಂದಿಸಿದರು.

Related posts

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya
error: Content is protected !!