23 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ತರಬೇತಿ ಪಡೆಯುವುದೇ ಸೌಭಾಗ್ಯ. ಬ್ಯೂಟೀಪಾರ್ಲರ್ ವೃತ್ತಿಯಲ್ಲಿ ಪ್ರತಿಯೊಬ್ಬರೂ ತನ್ನದೇ ಆದ ಸೃಜನಶೀಲತೆಯನ್ನು ಅಳವಡಿಸಿಕೊಂಡರೆ ಬೆಳವಣಿಗೆ ಹೊಂದಲು ಅನುಕೂಲಕರವಾಗುತ್ತದೆ. ಸಮಯಪಾಲನೆ, ಶಿಸ್ತು ಜೊತೆಗೆ ಇರಲಿ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ‌ ಮಾಧ್ಯಮ ( ಕೇಂದ್ರೀಯ ಪಠ್ಯ), ಉಜಿರೆ ಇದರ ಮುಖ್ಯೋಪಾಧ್ಯಾಯ ಮನಮೋಹನ್ ನಾಯಕ್ ಅಭಿಪ್ರಾಯಪಟ್ಟರು.

ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ 35 ದಿನಗಳ ಕಾಲ ವಸತಿಯುತ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ: ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತರಿಸಿ, ಮಾತನಾಡಿದವರು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಸುನೀಲ್ ನಾಯ್ಕೆ ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು, ಹಣಕಾಸಿನ ಜ್ಞಾನ ಮತ್ತು ಡಿಜಿಟಲ್ ವ್ಯವಹಾರಗಳ ಅರಿವು ಇಂದಿನ ಕಾಲದಲ್ಲಿ ಅತ್ಯಗತ್ಯವಾಗಿದ್ದು, ಈ ತರಬೇತಿ ನಿಮ್ಮಗೆಲ್ಲರಿಗೂ ಶುಭವಾಗಲಿ ಎಂದರು.

ಕಾರ್ಯಕ್ರಮದಲ್ಲಿ ಮಾದವಿ.‌ಎಂ. ರೈ ಅತಿಥಿ ಉಪನ್ಯಾಸಕರು, ಉಪಸ್ಥಿತರಿದ್ದರು.
ನಂತರ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಅವರು ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.
ಸಂಸ್ಥೆಯ ಹಿರಿಯ ಉಪನ್ಯಾಸಕ ಕರುಣಾಕರ್ ಕೆ. ಜೈನ್: ಅವರು ಧನ್ಯವಾದ ಸಮರ್ಪಿಸಿದರು.
ಜಲಜಾಕ್ಷಿ ಮತ್ತು ಬಳಗ ಪ್ರಾರ್ಥನೆ ಮಾಡಿದರು. ಜಯಲಕ್ಷೀ , ಶೈಲಜಾ ತರಬೇತಿ ಅನುಭವ ಹಂಚಿಕೊಂಡರು.

Related posts

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಜ. 7 -12 : ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಐ ಐ ಟಿ ಪ್ರವೇಶಕ್ಕೆ ಅರ್ಹತೆ: ರಾಷ್ಟ್ರಮಟ್ಟದಲ್ಲಿ ಧನುಷ್ ಗುತ್ತಿ 95 ನೇ ರ‍್ಯಾಂಕ್

Suddi Udaya
error: Content is protected !!