27.7 C
ಪುತ್ತೂರು, ಬೆಳ್ತಂಗಡಿ
June 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್‌ನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿಗಳಿಗೆ

ಗುರುವಾಯನಕೆರೆ: ಭಾರತದ ಅತ್ಯುನ್ನತ ಎಂಜಿನಿಯರಿಂಗ್ ಕಾಲೇಜುಗಳಾದ ಐಐಟಿ, ಎನ್ಐಟಿ, ಐಐಐಟಿ ಮತ್ತಿತರ ಜಿಎಫ್‌ಟಿ ಸಂಸ್ಥೆಗಳ ಜಂಟಿ ಸೀಟು ಹಂಚಿಕೆ ಪ್ರಕ್ರಿಯೆಯನ್ನು ನಿರ್ವಹಿಸುವ ಕೇಂದ್ರ ಶಿಕ್ಷಣ ಸಚಿವಾಲಯದ ಅಂಗವಾಗಿರುವ ಜಂಟಿ ಸೀಟು ಹಂಚಿಕೆ ಪ್ರಾಧಿಕಾರದ (JoSAA) ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯ ಹಲವು ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ.

ಹರ್ಷಿತ ಎಸ್ ಐಐಟಿ ದೆಹಲಿ, ವಿನಯ ಕೆ ಸಜ್ಜನರ್ ಎನ್‌ಐಟಿ ವಾರಂಗಲ್, ಕೆ. ಕೆ. ಸರ್ವಿಕ ಐಐಟಿ ಧಾರವಾಡ, ರೋಹಿತ್ ಆ‌ರ್. ಎಲ್ ಐಐಟಿ ಧಾರವಾಡ, ಸಮ್ಯಕ್ ವಿನಯ್ ಎನ್‌ಐಟಿಕೆ ಸುರತ್ಕಲ್, ಅಕ್ಷಯ್ ಎ ಎನ್‌ಐಟಿಕೆ ಸುರತ್ಕಲ್, ಶಶಾಂಕ ಗೌಡ ಎನ್‌ಐಟಿಕೆ ಸುರತ್ಕಲ್, ಸ್ವಸ್ತಿಕ್ ಎ ಜೈನ್ ಎನ್‌ಐಟಿಕೆ ಸುರತ್ಕಲ್, ತೇಜಲ್ ವಿ ವಂಟಕರ್ ಎನ್‌ಐಟಿಕೆ ಸುರತ್ಕಲ್, ಅಭಿನವ್ ಕೆ ಮಯ್ಯ ಎನ್‌ಐಟಿಕೆ ಸುರತ್ಕಲ್, ಯಶಸ್ ಗೌಡ ಎನ್ ಎನ್‌ಐಟಿ ರೌರ್ಕೆಲ, ಪೂರ್ವಿಕ ಜೆ ಎನ್‌ಐಟಿ ರಾಯ್‌ಪುರ, ಸಂಸ್ಥೆಗಳಿಗೆ ಆಯ್ಕೆಯಾಗಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಎಕ್ಸೆಲ್ ಪದವಿಪೂರ್ವ ಕಾಲೇಜಿನಿಂದ ಮೂರು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿ, ಎನ್‌ಐಟಿ, ಐಐಐಟಿ, ಐಐಎಸ್‌ಸಿ ಸೇರಿ ಭಾರತದ ಉತ್ಕೃಷ್ಟ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವುದು ಸಂಸ್ಥೆಯ ಗುಣಮಟ್ಟಕ್ಕೆ ಹಿಡಿದ ಕೈಗನ್ನಡಿಯೆಂದು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್‌ಕುಮಾರ್ ಜೈನ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Related posts

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya
error: Content is protected !!