September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ. ಹಿ. ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಇಲ್ಲಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ಕಾರ್ಯಕ್ರಮ ಉದ್ಘಾಟನೆಯು ಜೂ. 12 ರಂದು ನಡೆಯಿತು

ಮುಖ್ಯ ಅತಿಥಿಯಾಗಿ ಉಜಿರೆ ಎಸ್.ಡಿ.ಎಂ. ನ್ಯಾಚುರೋಪತಿ ಕಾಲೇಜಿನ ವೈದ್ಯಶಾಸ್ತ್ರದ ಉಪನ್ಯಾಸಕಿ ಡಾ. ಶಮಿತಾ ಅವರು ಮಾತನಾಡಿ, ಯೋಗ ಅತ್ಯಂತ ಪ್ರಾಚೀನವಾದದ್ದು. ಮಕ್ಕಳಲ್ಲಿ ಯೋಗಾಭ್ಯಾಸವನ್ನು ಮೂಡಿಸುವುದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ.ಇದು ಆರೋಗ್ಯಕರ ಜೀವನ ಸಾಗಿಸಲು ಇರುವ ಸುಲಭ ಮಾರ್ಗ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯ ಕಮಲ್ ತೇಜ್ ರಜಪೂತ್ ಮಾತನಾಡಿ, ಮಕ್ಕಳಲ್ಲಿ ಏಕಾಗ್ರತೆ ಬರಲು ಯೋಗ ಸಹಕಾರಿಯಾಗಿದೆ. ಒಂದು ವಾರ ಕಾಲ ನಡೆಯಲಿರುವ ಈ ಶಿಬಿರ ಉತ್ತಮ ರೀತಿಯಲ್ಲಿ ನಡೆಯಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕಾಲೇಜಿನ ವಿದ್ಯಾರ್ಥಿಗಳಾದ ರಾಮಕೃಷ್ಣ, ವಂದಿತ, ಭಾವನ ಉಪಸ್ಥಿತರಿದ್ದರು.
ಸಹ ಶಿಕ್ಷಕ ಶೇಖರ್ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಕ ಸಂಜೀವ ಕೆ ವಂದಿಸಿದರು.

Related posts

ಮುಂಡಾಜೆ ಮಂಜುಶ್ರೀ ಭಜನಾ ಮಂದಿರದ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!