27.6 C
ಪುತ್ತೂರು, ಬೆಳ್ತಂಗಡಿ
June 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ. ಹಿ. ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಇಲ್ಲಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ಕಾರ್ಯಕ್ರಮ ಉದ್ಘಾಟನೆಯು ಜೂ. 12 ರಂದು ನಡೆಯಿತು

ಮುಖ್ಯ ಅತಿಥಿಯಾಗಿ ಉಜಿರೆ ಎಸ್.ಡಿ.ಎಂ. ನ್ಯಾಚುರೋಪತಿ ಕಾಲೇಜಿನ ವೈದ್ಯಶಾಸ್ತ್ರದ ಉಪನ್ಯಾಸಕಿ ಡಾ. ಶಮಿತಾ ಅವರು ಮಾತನಾಡಿ, ಯೋಗ ಅತ್ಯಂತ ಪ್ರಾಚೀನವಾದದ್ದು. ಮಕ್ಕಳಲ್ಲಿ ಯೋಗಾಭ್ಯಾಸವನ್ನು ಮೂಡಿಸುವುದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ.ಇದು ಆರೋಗ್ಯಕರ ಜೀವನ ಸಾಗಿಸಲು ಇರುವ ಸುಲಭ ಮಾರ್ಗ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯ ಕಮಲ್ ತೇಜ್ ರಜಪೂತ್ ಮಾತನಾಡಿ, ಮಕ್ಕಳಲ್ಲಿ ಏಕಾಗ್ರತೆ ಬರಲು ಯೋಗ ಸಹಕಾರಿಯಾಗಿದೆ. ಒಂದು ವಾರ ಕಾಲ ನಡೆಯಲಿರುವ ಈ ಶಿಬಿರ ಉತ್ತಮ ರೀತಿಯಲ್ಲಿ ನಡೆಯಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕಾಲೇಜಿನ ವಿದ್ಯಾರ್ಥಿಗಳಾದ ರಾಮಕೃಷ್ಣ, ವಂದಿತ, ಭಾವನ ಉಪಸ್ಥಿತರಿದ್ದರು.
ಸಹ ಶಿಕ್ಷಕ ಶೇಖರ್ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಕ ಸಂಜೀವ ಕೆ ವಂದಿಸಿದರು.

Related posts

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya
error: Content is protected !!