27.6 C
ಪುತ್ತೂರು, ಬೆಳ್ತಂಗಡಿ
June 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಕೆ ಪಿ ಎಸ್ (ಪ್ರೌಢಶಾಲಾ ವಿಭಾಗ,) : ಶಾಲಾ ವಿದ್ಯಾರ್ಥಿ ಸರಕಾರಕ್ಕೆ ತಂತ್ರಜ್ಞಾನ ಬಳಸಿ ಮತದಾನ

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿ ಸರಕಾರಕ್ಕೆ ತಂತ್ರಜ್ಞಾನವನ್ನು ಬಳಸಿ ಚುನಾವಣೆಯನ್ನು ನಡೆಸಲಾಯಿತು.


ಈ ಚುನಾವಣೆಯಲ್ಲಿ ಸರಳತೆಯೊಂದಿಗೆ ಚುನಾವಣಾ ಪದ್ಧತಿಯಂತೆ ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂದೆ ಪಡೆಯಲು ಅವಕಾಶ, ಅಂತಿಮ ಕಣದಲ್ಲಿರುವ ಸ್ಪರ್ದಾಳುಗಳ ಪಟ್ಟಿ, ಈ ರೀತಿ ಎಲ್ಲಾ ಹಂತಗಳನ್ನು ಕ್ರಮವತ್ತಾಗಿ ನಡೆಸಲಾಯಿತು.

ತಂತ್ರಜ್ಞಾನವನ್ನು ಬಳಸಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಚುನಾವಣೆಯನ್ನು ನಡೆಸಲಾಯಿತು. ಬಳಿಕ ವಿಜೇತ ಅಭ್ಯರ್ಥಿಗಳನ್ನು ಪ್ರಕಟಿಸಿದ ನಂತರ ಸಂಸ್ಥೆಯ ಉಪ ಪ್ರಾಂಶುಪಾಲರಾದ ಗಣೇಶ್ ಬಿ ಯವರು ಪ್ರಮಾಣವಚನವನ್ನು ಶಾಲಾ ವಿದ್ಯಾರ್ಥಿ ನಾಯಕನಿಗೆ ಬೋಧಿಸಿದ ಬಳಿಕ ಉಳಿದ ಮಂತ್ರಿಗಳಿಗೆ ಬೋಧಿಸಿದರು.
ಈ ಚುನಾವಣಾ ವ್ಯವಸ್ಥೆಯಲ್ಲಿ ಮುಖ್ಯ ಚುನಾವಣಾ ಅಧಿಕಾರಿಯಾಗಿ ಸಂಸ್ಥೆಯ ಮುಖ್ಯಸ್ಥ ಗಣೇಶ್ ಬಿ, ಚುನಾವಣಾಧಿಕಾರಿಯಾಗಿ ಭವಾನಿ ಕೆ, ಸಹಾಯಕ ಚುನಾವಣೆ ಅಧಿಕಾರಿಯಾಗಿ ಧರಣೇಂದ್ರ ಕೆ ಹಾಗೂ ಶಾಲಾ ಶಿಕ್ಷಕರ ಮತ್ತು ಸರ್ವ ಸಿಬ್ಬಂದಿಗಳು ಎಲ್ಲಾ ರೀತಿಯ ಸಹಕಾರವನ್ನು ನೀಡಿದರು.


ಶಾಲಾ ನಾಯಕನಾಗಿ ಕಿರಣ್ ಕುಮಾರ್ ಹತ್ತನೇ 10 ಸಿ, ಶಾಲಾ ಉಪನಾಯಕ ಮಹಮ್ಮದ್ ಅಯಾನ್, ಕ್ರೀಡಾ ಮಂತ್ರಿ
ದ್ರುವಿತ್ , ಉಪ ಕ್ರೀಡಾ ಮಂತ್ರಿ ಚರಣ್ ,ವಾರ್ತಾ ಮಂತ್ರಿ ದೀಪಾ ಜಗದೀಶ ಹಡಪದ ,ಉಪ ವಾರ್ತಾ ಮಂತ್ರಿ ನವ್ಯ ,ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮಂತ್ರಿ ಶಿವುಕುಮಾರ್ ರಾಜಶೇಖರ್ ಹತ್ತರಸಂಗ,ಉಪ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮಂತ್ರಿ ಶಮಿತಾ ,ಆರೋಗ್ಯ ಮತ್ತು ಆಹಾರ ಮಂತ್ರಿ, ಸ್ವರ್ತಿಕ್ , ಉಪ ಆಹಾರ ಮಂತ್ರಿ ಶ್ರಾವಣ ನಾಯಕ್ ,ಸ್ವಚ್ಛತಾ ಮಂತ್ರಿ ಅನುಶ್ರೀ ,
ಉಪ ಸ್ವಚ್ಛತಾ ಮಂತ್ರಿ ಲಾವಣ್ಯ, ಪ್ರತಿಪಕ್ಷದ ನಾಯಕರಾಗಿ ಶಶಾಂಕ್ ಭಟ್ ಮತ್ತು ಸಾನ್ವಿ ಎಸ್ ಪೂಜಾರಿ ಆಯ್ಕೆಯಾಗಿರುತ್ತಾರೆ.

Related posts

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೇ ರ‌್ಯಾಂಕ್

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

Suddi Udaya
error: Content is protected !!