September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ; ಸುಳ್ಳು ಸಾಕ್ಷ್ಯ ಒತ್ತಾಯ ಆರೋಪಕ್ಕೆ ತಡೆ

ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಪ್ರಕರಣದ ತನಿಖೆ ಮುಂದುವರಿಕೆಗೆ ಮಂಗಳವಾರ ಅನುಮತಿಸಿರುವ ಕರ್ನಾಟಕ ಹೈಕೋರ್ಟ್, ಇದೇ ಪ್ರಕರಣದಲ್ಲಿ ಸುಳ್ಳು ಸಾಕ್ಷ್ಯ ನೀಡುವಂತೆ ಒತ್ತಾಯಿಸಿದ‌ ಆರೋಪದ ತನಿಖೆಗೆ ತಡೆ ನೀಡಿ‌ ಆದೇಶ ಹೊರಡಿಸಿದೆ.

ಜೀವ ಬೆದರಿಕೆ ಹಾಕಿದ ಮತ್ತು ಸುಳ್ಳು ಸಾಕ್ಷ್ಯ ಹೇಳಲು ಬಲವಂತಪಡಿಸಿದ ಆರೋಪದ ಮೇಲೆ ಪುತ್ತೂರು ಗ್ರಾಮೀಣ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು. ತನಿಖೆಗೆ ತಿಮರೋಡಿ ಪೊಲೀಸರಿಗೆ ಸಹಕರಿಸಬೇಕು ಎಂದು ನಿರ್ದೇಶಿಸಿತು.

ತಿಮರೋಡಿ ಪರ ವಕೀಲ ಎಂ ಆರ್ ಬಾಲಕೃಷ್ಣ ಅವರು, ಅರ್ಜಿದಾರರು ಪ್ರಕರಣದಲ್ಲಿ ಮೊದಲನೆ ಆರೋಪಿಯಾಗಿದ್ದಾರೆ. ಪ್ರಕರಣದ ದೂರುದಾರರಿಗೆ,‌ ಎರಡನೇ ಆರೋಪಿಯು ಫೋನ್ ಮಾಡಿ ದೂರು ಹಿಂಪಡೆಯುವಂತೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವಿದೆ. ಅರ್ಜಿದಾರರನ್ನು ಅಪರಾಧಿಯನ್ನಾಗಿಸಲು ಅಗತ್ಯವಾದ ಅಂಶಗಳು ದೂರಿನಲ್ಲಿ‌ ಇಲ್ಲ. ಈ ಆರೋಪಗಳು ಅರ್ಜಿದಾರಿಗೆ ಅನ್ವಯವಾಗದು. ಘಟನೆ ನಡೆದ 16 ದಿನಗಳ‌ ನಂತರ ದೂರು ದಾಖಲಿಸಲಾಗಿದೆ. ದುರುದ್ದೇಶದಿಂದ ತಿಮರೋಡಿ ಮೇಲೆ ದೂರು ದಾಖಲಿಸಲಾಗಿದೆ” ಎಂದರು.

ದೂರುದಾರರಾದ ಸತೀಶ್ ಕುಮಾರ್ ರೈ ಅವರ ಪರ ವಕೀಲರು ಎಸ್‌ ರಾಜಶೇಖರ್ ಅವರು “ಫೋನ್ ಸಂಭಾಷಣೆ‌ಯ ವಿವರ ಒಳಗೊಂಡ ಪೆನ್ ಡ್ರೈವ್ ಹಾಗೂ ಸಂಭಾಷಣೆಯ ವಿವರ ಸಲ್ಲಿಸಲಾಗಿದೆ.‌ ಅರ್ಜಿದಾರರ ವಿರುದ್ಧ ಹಿಂದೆ ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ ದೂರುದಾರನ್ನು ಬೆದರಿಸಲಾಗಿದೆ‌” ಎಂದು ತಿಳಿಸಿದರು.

ವಾದ- ಪ್ರತಿವಾದ ಆಲಿಸಿದ ಪೀಠವು ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಆರೋಪಿಸಲಾಗಿರುವ ಸುಳ್ಳು ಸಾಕ್ಷ್ಯ ನೀಡುವಂತೆ ಬಲವಂತಪಡಿಸಿದ (ಬಿಎನ್ ಎಸ್ ಸೆಕ್ಷನ್ 232) ಅಪರಾಧ ಸಂಬಂಧ ತನಿಖೆ ನಡೆಸುವುದಕ್ಕೆ ತಡೆ ನೀಡಿತು. ಆದರೆ, ಜೀವ ಬೆದರಿಕೆ ಹಾಕಿದ (ಬಿಎನ್ ಎಸ್ ಸೆಕ್ಷಮ್ 351(2) ಅಪರಾಧ ಸಂಬಂಧ ಪೊಲೀಸರು ತನಿಖೆ ಮುಂದುವರಿಸಬಹುದು. ಅರ್ಜಿದಾರರು ತನಿಖೆಗೆ ಸಹಕರಿಸಬೇಕು ಎಂದು ಆದೇಶ ಮಾಡಿ ಅರ್ಜಿ ವಿಚಾರಣೆ ಮುಂದೂಡಿತು.

Related posts

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

Suddi Udaya

ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳ ಮಹಾವಿದ್ಯಾಲಯ ಹಾಗೂ ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ಉಚಿತ ಯೋಗ ಶಿಬಿರ

Suddi Udaya

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya
error: Content is protected !!