23.3 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

ಬೆಳ್ತಂಗಡಿ: ರೋಟರಿ ಕ್ಲಬ್, ಭಾರತೀಯ ದಂತ ವೈದ್ಯ ಸಂಘ ಮತ್ತು ಆಯುಷ್ ಫೆಡರೇಶನ್ ಆಫ್ ಇಂಡಿಯಾದ ಸಹಯೋಗದಲ್ಲಿ ಡೋಂಗ್ರೆ ಕುಟುಂಬಸ್ಥರು ಕೊಡಮಾಡುವ 18ನೇ ವರ್ಷದ ಶಾಲಾ ಶೈಕ್ಷಣಿಕ ಪರಿಕರಗಳ ವಿತರಣಾ ಸಮಾರಂಭವು ಜೂ. 17ರಂದು ಸೂಳಬೆಟ್ಟು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಅತಿಥಿಗಳಾಗಿದ್ದ ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷ ಶ್ರೀಧರ ಕೆ.ವಿ., ಕಾರ್ಯದರ್ಶಿ ಡಾ. ರಾಘವೇಂದ್ರ ಪಿದಮಲೆ ಮತ್ತು ಡಾ. ಮುಕ್ತಾ ಪಟವರ್ಧನ್ ಅವರು ಶಾಲಾ ಹಾಗೂ ಅಂಗನವಾಡಿ ಮಕ್ಕಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಿದರು. ದಾನಿಗಳಾದ ಡಾ. ಶಶಿಧರ ಡೋಂಗ್ರೆ ಕಾರ್ಯಕ್ರಮ ಉದ್ಘಾಟಿಸಿದರು. ಡಾ. ಸುಷ್ಮಾ ಡೋಂಗ್ರೆ, ಡಾ. ಮನೀಷ್ ಡೋಂಗ್ರೆ ಮತ್ತು ಬಳಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ವಿಶ್ವನಾಥ ಡೋಂಗ್ರೆ ಅವರು ಉಪಸ್ಥಿತರಿದ್ದರು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರವೀಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಕ್ಕಳಿಗೆ ಬರೆಯುವ ಪುಸ್ತಕ, ಸಮವಸ್ತ್ರ, ಬ್ಯಾಗ್, ಕೊಡೆ, ಪೆನ್ನು, ಪೆನ್ಸಿಲ್, ಪೇಸ್ಟ್ ಮತ್ತಿತರ ಪರಿಕರಗಳನ್ನು ವಿತರಿಸಲಾಯಿತು.

ಇದೇ ವೇಳೆ, ಜೆ.ಇ.ಇ. ಮೈನ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸೂಳಬೆಟ್ಟಿನ ಪ್ರಥಮ ಗೋಖಲೆ ಮತ್ತು ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಅಳದಂಗಡಿಯ ಸಾಕ್ಷಿ ಅವರನ್ನು ಅಭಿನಂದಿಸಿ, ಡೋಂಗ್ರೆ ಕುಟುಂಬಸ್ಥರು ಆರ್ಥಿಕ ಸಹಾಯ ನೀಡಿ ಪ್ರೋತ್ಸಾಹಿಸಿದರು.

ಶಿಕ್ಷಕಿ ರೀಟಾ ರೋಡ್ರಿಗಸ್, ಅಂಗನವಾಡಿ ಕಾರ್ಯಕರ್ತೆ ಶಕುಂತಲಾ, ಅಕ್ಷರ ದಾಸೋಹದ ಲವಿನಾ ಮತ್ತು ಚಿತ್ರಾಕ್ಷಿ ಅವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಲೀನಾ ಮೊರಾಸ್ ಸ್ವಾಗತಿಸಿ, ವಂದಿಸಿದರು.

Related posts

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya

ಉಜಿರೆ: ಸುಶೀಲಾ ಬಾಯಿ ಮರಾಠೆ ಸಂಸ್ಮರಣೆ: ಕವಿಗೋಷ್ಠಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya
error: Content is protected !!