September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎನ್‌ಡಿಆರ್‌ಎಫ್ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ವತಿಯಿಂದ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಮುಖ್ಯ ಅತಿಥಿಗಳಾಗಿ ಎನ್‌ಡಿಆರ್‌ಎಫ್ ತಂಡದ ಕಮಾಂಡರ್ ಶಾಂತಿಲಾಲ್ ಜಟಿಯಾ, ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ ಸುಭಾಷ್ ಸಿಂಧೆ ಹಾಗೂ ರಕ್ಷಕರಾದ ಚಂದ್ರಶೇಖರ್ ರೆಡ್ಡಿ, ಬಾಲಕೃಷ್ಣ ಮತ್ತು ವಿ. ಶ್ರೀನಿವಾಸಲು ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ ಸುಭಾಷ್ ಸಿಂಧೆ ಅವರು ಭೂಕಂಪದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಜನಸಂದಣಿಯ ನೂಕುನುಗ್ಗಲಿನಿಂದ ಪಾರಾಗುವ ವಿಧಾನಗಳು, ಪ್ರಥಮ ಚಿಕಿತ್ಸೆ, ಗಂಟಲಲ್ಲಿ ಆಹಾರ ಅಥವಾ ಇತರ ವಸ್ತು ಸಿಲುಕಿದಾಗ ನೀಡಬೇಕಾದ ತುರ್ತು ನೆರವು, ಸಿಪಿಆರ್ (CPR), ಕುಸಿದ ಕಟ್ಟಡಗಳ ರಕ್ಷಣಾ ಕಾರ್ಯಾಚರಣೆ ಹಾಗೂ ನೀರಿನಲ್ಲಿ ಮುಳುಗುವವರ ರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ.ಆರ್. ಅವರ ಮಾರ್ಗದರ್ಶನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ವಿಜ್ಞಾನ ಸಂಘ ಹಾಗೂ ಗಣಿತ ಸಂಘಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ, ವಿಜ್ಞಾನ ಸಂಘದ ಸದಾನಂದ ಎ., ಶ್ರೀಮತಿ ನಯನ ಹಾಗೂ ಸ್ಕೌಟ್-ಗೈಡ್ ಶಿಕ್ಷಕರಾದ ಮಂಜುನಾಥ್, ನೀತಾ ಕೆ.ಎಸ್., ಜಯರಾಮ್, ಜಯಲಕ್ಷ್ಮಿ, ಗೀತಾ ಪಿ., ರಮ್ಯಾ ಬಿ.ಎಸ್., ಪ್ರಮೀಳಾ ಎನ್., ಅಮಿತಾ ಸಮತಾ, ಸೌಮ್ಯಾ ಪಿ., ಪುಷ್ಪಲತಾ ಮತ್ತು ಮೋಹಿನಿ ಅವರು ಸಹಕರಿಸಿದರು.


ಕಬ್ ಮಾಸ್ಟರ್ ನೀತಾ ಕೆ ಎಸ್ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya

ಜೂ.21: ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ತರಬೇತಿ ಕಾರ್ಯಾಗಾರ

Suddi Udaya

ಮೇ 27: ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ರೋಟರಿ ಕ್ಲಬ್ ಹಾಗೂ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya
error: Content is protected !!