August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯದಲ್ಲಿ ಯಕ್ಷ ಪುರುಷೋತ್ತಮ ಸರಣಿಯ ಸಮಾರೋಪ

ಬಾರ್ಯ: ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಮತ್ತು ಶ್ರವಣರಂಗ ಪ್ರತಿಷ್ಠಾನ ಸವಣೂರು ಇದರ ಸಂಯೋಜನೆಯಲ್ಲಿ ಅಧಿಕ ಮಾಸದ ಪ್ರಯುಕ್ತ ಶ್ರೀ ಮಹಾವಿಷ್ಣು ದೇವಸ್ಥಾನಗಳಲ್ಲಿ ನಡೆಸಲಾದ ಯಕ್ಷ ಪುರುಷೋತ್ತಮ ಸರಣಿಯ 7ನೇ ತಾಳಮದ್ದಳೆಯು ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರಗಿತು .

ಮೇದಿನಿ ನಿರ್ಮಾಣ , ತುಳುನಾಡ ಬಲಿಯೇಂದ್ರೆ ಮತ್ತು ಭಕ್ತ ಪ್ರಹ್ಲಾದ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು.

ಭಾಗವತರಾಗಿ ಕುಸುಮಾಕರ ಆಚಾರ್ಯ ಹಳೇನೇರಂಕಿ, ಸತೀಶ್ ಇರ್ದೆ, ಆನಂದ ಸವಣೂರು,ನಿತೀಶ್. ವೈ ಹಿಮ್ಮೆಳದಲ್ಲಿ ಶ್ರೀ ಹರಿ ನಗ್ರಿ, ಅಚ್ಯುತ ಪಾಂಗಣ್ಣಾಯ, ತಾರಾನಾಥ ಸವಣೂರು ,ಸಮರ್ಥ ವಿಷ್ಣು ಕಡಂಬಳಿಕೆ, ಅನೀಶ್ ಕೃಷ್ಣ ಪುಣಚ ಸಹಕರಿಸಿದರು.

ಭಕ್ತ ಪ್ರಹ್ಲಾದದಲ್ಲಿ ಗುಂಡ್ಯಡ್ಕ ಈಶ್ವರ ಭಟ್ (ಹಿರಣ್ಯಕಶ್ಯಪ), ಭಾಸ್ಕರ ಬಾರ್ಯ (ಕಯಾದು), ದಿವಾಕರ ಆಚಾರ್ಯ ಗೇರುಕಟ್ಟೆ (ಗುರುಗಳು), ದುಗ್ಗಪ್ಪ ನಡುಗಲ್ಲು (ನರಸಿಂಹ) ಶುಭಾ ಅಡಿಗ (ಪ್ರಹ್ಲಾದ) ಮೇದಿನಿ ನಿರ್ಮಾಣದಲ್ಲಿ ಕಿಶೋರಿ ದುಗ್ಗಪ್ಪ ನಡುಗಲ್ಲು (ಮಹಾ ವಿಷ್ಣು) ಭಾರತಿ ರೈ ಅರಿಯಡ್ಕ (ಮಧು),ಶಾರದಾ ಅರಸ್ (ಕೈಟಭ), ಮತ್ತು ತುಳುನಾಡ ಬಲಿಯೇಂದ್ರೆ ಪ್ರಸಂಗದಲ್ಲಿ ಗುಡ್ಡಪ್ಪ ಬಲ್ಯ (ವಾಮನ) ತಾರಾನಾಥ ಸವಣೂರು ( ಬಲಿ) ಹರಿಣಾಕ್ಷಿ ಜೆ ಶೆಟ್ಟಿ (ಶುಕ್ರಾಚಾರ್ಯ), ಅಚ್ಯುತ ಪಾಂಗಣ್ಣಾಯ (ವಿಂದ್ಯಾವಳಿ) ಭಾಗವಹಿಸಿದ್ದರು

ದೇವಳದ ಆಡಳಿತ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಪೈ ಬಾರ್ಯ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ವರ್ಣಲತಾ ಬಾರ್ಯ ನಾರಾಯಣ ಗೌಡ, ಪ್ರಶಾಂತ್ ಪೈ, ವಿಜಯಲಕ್ಷ್ಮಿ ರೈ, ಶಿವರಾಮ್ ನಾಯ್ಕ, ವಿದ್ಯಾಪ್ರಭಾಕರ್, ಮನೋಹರ ಶೆಟ್ಟಿ, ಶೇಸಪ್ಪ ಸಾಲಿಯಾನ್, ಪ್ರವೀಣ್ ಮೂರುಗೋಳಿ,ಅರುಣ್ ಬಂಗೇರ ಅರ್ಚಕರಾದ ಗುರುಪ್ರಸಾದ್ ನೂರಿತ್ತಾಯ ಕಲಾವಿದರನ್ನು ಗೌರವಿಸಿದರು. ದೇವಳದ ಆಡಳಿತ ಸೇವಾ ಸಮಿತಿಯ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ ಟ್ರಸ್ಟಿ ಮನೋಹರ ಶೆಟ್ಟಿ ವಂದಿಸಿದರು. ಶ್ರವಣರಂಗ ಪ್ರತಿಷ್ಠಾನದ ಸಂಚಾಲಕ ತಾರನಾಥ ಸವಣೂರು ಏಳು ತಾಳಮದ್ದಳೆಗಳ ಸರಣಿಯಲ್ಲಿ ಸಹಕರಿಸಿದ ಪ್ರಾಯೋಜಕರಿಗೆ, ಕಲಾವಿದರಿಗೆ ಕೃತಜ್ಞತೆ ಅರ್ಪಿಸಿದರು.

Related posts

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಸಿಎ ದಿನಾಚರಣೆ

Suddi Udaya

ನಾಪತ್ತೆಯಾಗಿದ್ದ ಯುವಕನ ಶವ ಪಲ್ಗುಣಿ ನದಿಯಲ್ಲಿ ಪತ್ತೆ

Suddi Udaya

ಅಳದಂಗಡಿ: ಬರಾಯ ಅರಮನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ಭೇಟಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya
error: Content is protected !!