30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೀರಿನ ಯೂನಿಟ್ ಮಿತಿ ಹೆಚ್ಚಳಕ್ಕೆ ಎಸ್‌ಡಿಪಿಐ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 08ರ ಕಕ್ಕೇಜಾಲ್ ಗಾಂಧಿನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಬಳಕೆಯ ಯೂನಿಟ್ ಮಿತಿಯನ್ನು ಹೆಚ್ಚಿಸುವಂತೆ ಹಾಗೂ ಹೆಚ್ಚುವರಿ ಬಳಕೆಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಪರಿಷ್ಕರಿಸುವಂತೆ ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರದೇಶದ ಹೆಚ್ಚಿನ ನಿವಾಸಿಗಳು ದಿನಗೂಲಿ ಕಾರ್ಮಿಕರಾಗಿದ್ದು, ಪ್ರಸ್ತುತ ನಿಗದಿಪಡಿಸಿರುವ 7 ಯೂನಿಟ್‌ಗಳ ಮಿತಿಗಿಂತ ಹೆಚ್ಚಿನ ನೀರಿನ ಬಳಕೆ ಅನಿವಾರ್ಯವಾಗುತ್ತಿದೆ. ಇದರ ಪರಿಣಾಮವಾಗಿ ಮಾಸಿಕ ನೀರಿನ ಬಿಲ್ ಹೆಚ್ಚಾಗಿ ಬಂದು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೊರೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಆದ್ದರಿಂದ ಒಂದು ಮನೆಗೆ ನಿಗದಿಪಡಿಸಿರುವ ನೀರಿನ ಬಳಕೆಯ ಮಿತಿಯನ್ನು 7 ಯೂನಿಟ್‌ನಿಂದ 20 ಯೂನಿಟ್‌ಗಳಿಗೆ ಹೆಚ್ಚಿಸಬೇಕು. ಜೊತೆಗೆ ಹೆಚ್ಚುವರಿ ಯೂನಿಟ್‌ಗಳಿಗೆ ವಿಧಿಸಲಾಗುವ ಶುಲ್ಕವನ್ನು ಮರುಪರಿಶೀಲಿಸಿ ಕಡಿತಗೊಳಿಸಬೇಕು. ಅಲ್ಲದೆ 40 ಯೂನಿಟ್‌ಗಳವರೆಗೆ ನೀರಿನ ಬಳಕೆಯನ್ನು ಯಾವುದೇ ಕಾರಣಕ್ಕೂ ವಾಣಿಜ್ಯ (ಕಮರ್ಷಿಯಲ್) ಸಂಪರ್ಕವೆಂದು ಪರಿಗಣಿಸಬಾರದು ಎಂದು ಆಗ್ರಹಿಸಲಾಗಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪಂಚಾಯತ್ ಅಧಿಕಾರಿಗಳಿಗೆ ಕೋರಲಾಗಿದೆ. ಈ ಸಂದರ್ಭದಲ್ಲಿ ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ಅಧ್ಯಕ್ಷ ಇರ್ಫಾನ್ ಕಕ್ಕೇಜಾಲ್, ಕಾರ್ಯದರ್ಶಿ ಸವಾದ್, ಶರ್ವಾನ್, ಇಲ್ಯಾಸ್ ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಕಳಿಯ : ಸಂಬೋಳ್ಯ ನಿವಾಸಿ ಸುಂದರ ನಾಯ್ಕ ನಿಧನ

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!