24.9 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೀರಿನ ಯೂನಿಟ್ ಮಿತಿ ಹೆಚ್ಚಳಕ್ಕೆ ಎಸ್‌ಡಿಪಿಐ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 08ರ ಕಕ್ಕೇಜಾಲ್ ಗಾಂಧಿನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಬಳಕೆಯ ಯೂನಿಟ್ ಮಿತಿಯನ್ನು ಹೆಚ್ಚಿಸುವಂತೆ ಹಾಗೂ ಹೆಚ್ಚುವರಿ ಬಳಕೆಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಪರಿಷ್ಕರಿಸುವಂತೆ ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರದೇಶದ ಹೆಚ್ಚಿನ ನಿವಾಸಿಗಳು ದಿನಗೂಲಿ ಕಾರ್ಮಿಕರಾಗಿದ್ದು, ಪ್ರಸ್ತುತ ನಿಗದಿಪಡಿಸಿರುವ 7 ಯೂನಿಟ್‌ಗಳ ಮಿತಿಗಿಂತ ಹೆಚ್ಚಿನ ನೀರಿನ ಬಳಕೆ ಅನಿವಾರ್ಯವಾಗುತ್ತಿದೆ. ಇದರ ಪರಿಣಾಮವಾಗಿ ಮಾಸಿಕ ನೀರಿನ ಬಿಲ್ ಹೆಚ್ಚಾಗಿ ಬಂದು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೊರೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಆದ್ದರಿಂದ ಒಂದು ಮನೆಗೆ ನಿಗದಿಪಡಿಸಿರುವ ನೀರಿನ ಬಳಕೆಯ ಮಿತಿಯನ್ನು 7 ಯೂನಿಟ್‌ನಿಂದ 20 ಯೂನಿಟ್‌ಗಳಿಗೆ ಹೆಚ್ಚಿಸಬೇಕು. ಜೊತೆಗೆ ಹೆಚ್ಚುವರಿ ಯೂನಿಟ್‌ಗಳಿಗೆ ವಿಧಿಸಲಾಗುವ ಶುಲ್ಕವನ್ನು ಮರುಪರಿಶೀಲಿಸಿ ಕಡಿತಗೊಳಿಸಬೇಕು. ಅಲ್ಲದೆ 40 ಯೂನಿಟ್‌ಗಳವರೆಗೆ ನೀರಿನ ಬಳಕೆಯನ್ನು ಯಾವುದೇ ಕಾರಣಕ್ಕೂ ವಾಣಿಜ್ಯ (ಕಮರ್ಷಿಯಲ್) ಸಂಪರ್ಕವೆಂದು ಪರಿಗಣಿಸಬಾರದು ಎಂದು ಆಗ್ರಹಿಸಲಾಗಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪಂಚಾಯತ್ ಅಧಿಕಾರಿಗಳಿಗೆ ಕೋರಲಾಗಿದೆ. ಈ ಸಂದರ್ಭದಲ್ಲಿ ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ಅಧ್ಯಕ್ಷ ಇರ್ಫಾನ್ ಕಕ್ಕೇಜಾಲ್, ಕಾರ್ಯದರ್ಶಿ ಸವಾದ್, ಶರ್ವಾನ್, ಇಲ್ಯಾಸ್ ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

Related posts

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆ : ಬಂಗೇರ ಖಂಡನೆ

Suddi Udaya

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಿ ಕಡಿರುದ್ಯಾವರ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಸ್ಲಿಮ್ ಮುಖಂಡರಿಂದ ಶಾಹುಲ್ ಹಮೀದ್ ಕೆ.ಕೆ. ನೇತೃತ್ವದಲ್ಲಿ ಸಚಿವ ಝಮೀರ್ ಅಹ್ಮದ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

Suddi Udaya

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!