August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೀರಿನ ಯೂನಿಟ್ ಮಿತಿ ಹೆಚ್ಚಳಕ್ಕೆ ಎಸ್‌ಡಿಪಿಐ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 08ರ ಕಕ್ಕೇಜಾಲ್ ಗಾಂಧಿನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಬಳಕೆಯ ಯೂನಿಟ್ ಮಿತಿಯನ್ನು ಹೆಚ್ಚಿಸುವಂತೆ ಹಾಗೂ ಹೆಚ್ಚುವರಿ ಬಳಕೆಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಪರಿಷ್ಕರಿಸುವಂತೆ ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರದೇಶದ ಹೆಚ್ಚಿನ ನಿವಾಸಿಗಳು ದಿನಗೂಲಿ ಕಾರ್ಮಿಕರಾಗಿದ್ದು, ಪ್ರಸ್ತುತ ನಿಗದಿಪಡಿಸಿರುವ 7 ಯೂನಿಟ್‌ಗಳ ಮಿತಿಗಿಂತ ಹೆಚ್ಚಿನ ನೀರಿನ ಬಳಕೆ ಅನಿವಾರ್ಯವಾಗುತ್ತಿದೆ. ಇದರ ಪರಿಣಾಮವಾಗಿ ಮಾಸಿಕ ನೀರಿನ ಬಿಲ್ ಹೆಚ್ಚಾಗಿ ಬಂದು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೊರೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಆದ್ದರಿಂದ ಒಂದು ಮನೆಗೆ ನಿಗದಿಪಡಿಸಿರುವ ನೀರಿನ ಬಳಕೆಯ ಮಿತಿಯನ್ನು 7 ಯೂನಿಟ್‌ನಿಂದ 20 ಯೂನಿಟ್‌ಗಳಿಗೆ ಹೆಚ್ಚಿಸಬೇಕು. ಜೊತೆಗೆ ಹೆಚ್ಚುವರಿ ಯೂನಿಟ್‌ಗಳಿಗೆ ವಿಧಿಸಲಾಗುವ ಶುಲ್ಕವನ್ನು ಮರುಪರಿಶೀಲಿಸಿ ಕಡಿತಗೊಳಿಸಬೇಕು. ಅಲ್ಲದೆ 40 ಯೂನಿಟ್‌ಗಳವರೆಗೆ ನೀರಿನ ಬಳಕೆಯನ್ನು ಯಾವುದೇ ಕಾರಣಕ್ಕೂ ವಾಣಿಜ್ಯ (ಕಮರ್ಷಿಯಲ್) ಸಂಪರ್ಕವೆಂದು ಪರಿಗಣಿಸಬಾರದು ಎಂದು ಆಗ್ರಹಿಸಲಾಗಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪಂಚಾಯತ್ ಅಧಿಕಾರಿಗಳಿಗೆ ಕೋರಲಾಗಿದೆ. ಈ ಸಂದರ್ಭದಲ್ಲಿ ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ಅಧ್ಯಕ್ಷ ಇರ್ಫಾನ್ ಕಕ್ಕೇಜಾಲ್, ಕಾರ್ಯದರ್ಶಿ ಸವಾದ್, ಶರ್ವಾನ್, ಇಲ್ಯಾಸ್ ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

Related posts

ಮಚ್ಚಿನ: ಮನೆಗೆ ಮರ ಬಿದ್ದು ಹಾನಿ

Suddi Udaya

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya
error: Content is protected !!