25.5 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ-ಕೋರ್ಟು ರಸ್ತೆಯಲ್ಲಿ ಅಪಾಯಕಾರಿ ಗುಂಡಿಗೆ ರೆಡ್ ಟೇಪ್ ಹಾಕಿ ಎಚ್ಚರಿಕೆ

ಬೆಳ್ತಂಗಡಿ: ಬೆಳ್ತಂಗಡಿಯಿಂದ ಕೋರ್ಟುಗೆ ಹೋಗುವ ರಸ್ತೆ ಬದಿಯಲ್ಲಿ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಚಾಲಕರಿಗೆ ಹಾಗೂ ಪಾದಾಚಾರಿಗಳಿಗೆ ಅಪಾಯವನ್ನು ತಂದೊಡ್ಡಿದೆ. ಇದೀಗ ಗುಂಡಿ ಗೋಚರಿಸಲು ಕೆಂಪುಪಟ್ಟಿ ಹಾಕಲಾಗಿದೆ. ಸುದ್ದಿ ಉದಯ ವಾರ ಪತ್ರಿಕೆಯಲ್ಲಿ ಜೂ.11 ರಂದು ಪ್ರಕಟವಾದ ವಿಶೇಷ ವರದಿಯಾ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಸಾರ್ವಜನಿಕರ ಸುರಕ್ಷತೆಗಾಗಿ ಗುಂಡಿಯ ಸುತ್ತ ಕೆಂಪು ಪಟ್ಟಿ ಹಾಕಿದ್ದಾರೆ.

ಕೋರ್ಟು ರಸ್ತೆಗೆ ತಾಗಿಕೊಂಡೇ ಈ ಗುಂಡಿ ನಿರ್ಮಾಣವಾಗಿದ್ದು, ವಾಹನಗಳಲ್ಲಿ ಬರುವ ಚಾಲಕರಿಗೆ ಇದು ಪಕ್ಕನೆ ಅರಿವಿಗೆ ಬರುವುದಿಲ್ಲ, ಯಾರೋ ಒಬ್ಬರು ಪುಣ್ಯಾತ್ಮರು ಗುಂಡಿ ನಿರ್ಮಾಣವಾದ ಜಾಗದ ಬಳಿ ರಸ್ತೆಯಲ್ಲಿ ಕಲ್ಲೊಂದನ್ನು ಇಟ್ಟು ಇಲ್ಲಿ ಅಪಾಯ ಇದೆ ಎಂಬ ಬಗ್ಗೆ ಎಚ್ಚರಿಸುವ ಕೆಲಸವನ್ನು ಮಾಡಿದ್ದರು. ಈ ರಸ್ತೆಯಲ್ಲಿ ಕೋರ್ಟು, ಸುದೇಮುಗೇರು, ಸಂಜಯನಗದ ಕಡೆ ಪ್ರತಿ ದಿನ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಹೋಗುತ್ತಾರೆ. ಹಲವಾರು ವಾಹನಗಳ ಓಡಾಟ ಇದೆ. ರಸ್ತೆಯ ಎರಡು ಬಂದಿಯ ಕುಸಿದ ಗುಂಡಿ ನಿರ್ಮಾಣವಾದರೂ ಸಂಬಂಧಪಟ್ಟ ಇಲಾಖೆಯಾಗಲಿ ಅಧಿಕಾರಿಗಳಾಗಲಿ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆವಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ನಿಡ್ಲೆ: ವಿಶ್ವನಾಥ ಪೂಜಾರಿ ನಿಧನ

Suddi Udaya
error: Content is protected !!