
ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್. ಪಿ. ವೈ. ಎಸ್. ಎಸ್. (ರಿ )ಕರ್ನಾಟಕ, ಶ್ರೀ ಪತಂಜಲಿ ಯೋಗಶಿಕ್ಷಣ ಪೌಂಡೇಶನ್ (ರಿ), ಮಂಗಳೂರು, ಉಪ್ಪಿನಂಗಡಿ ತಾಲೂಕು ಇದರ ವತಿಯಿಂದ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಆಯುಷ್ ಪಠ್ಯ ಕ್ರಮದಂತೆ ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿಯ ಶ್ರೀ ದುರ್ಗಾಗಣೇಶ ಸಭಾಭವನದಲ್ಲಿ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳು ಹಾಗೂ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಜೂ.21 ರಂದು ಬೆಳಿಗ್ಗೆ 4.45 ರಿಂದ 7 ರ ವರೆಗೆ ನಡೆಯಲಿರುವುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಯೋಗಾಸಕ್ತರು ಹಾಗೂ ಸಾರ್ವಜನಿಕರು ಈ ವಿಶೇಷ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಲಾಗಿದೆ.












