25.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಉಜಿರೆ ಸಿಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನದ ಜಾಗೃತಿ – ಮಾಹಿತಿ ಕಾರ್ಯಾಗಾರ

ಉಜಿರೆ : ಜೆಸಿಐ ಉಜಿರೆ ಸಿಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಎರಡು ಪ್ರಮುಖ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ರಕ್ತದಾನದ ಜಾಗೃತಿ – ಮಾಹಿತಿ ಕಾರ್ಯಾಗಾರ
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸೇವಾ ಭಾರತಿ ಸಂಸ್ಥೆಯ ಸಂಸ್ಥಾಪಕರು, ಅಧ್ಯಕ್ಷ ವಿನಾಯಕ ರಾವ್ ರವರು ರಕ್ತದಾನ ಶಿಬಿರ ಆಯೋಜನೆಯ ತಮ್ಮ ಸ್ವಅನುಭವಗಳನ್ನು ಹಂಚಿಕೊಂಡು, ರಕ್ತದಾನದ ಮಹತ್ವವನ್ನು ತಿಳಿಸಿದರು. “ಬ್ಲಡ್ ಡೊನೇಟ್” ತುರ್ತು ಸೌಲಭ್ಯವನ್ನು ಹೊಂದಿರುವ ಸೇವಾ ಭಾರತಿ ಸಂಸ್ಥೆಯ ಬಗ್ಗೆ ಮಾಹಿತಿ ನೀಡಿ, ಅಗತ್ಯ ಸಂದರ್ಭದಲ್ಲಿ ಸಂಪರ್ಕಿಸುವಂತೆ ತಿಳಿಸಿ ಇವರು ಜೆಸಿಐ ಉಜಿರೆ ಘಟಕದ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.

ಸನ್ಮಾನ ಕಾರ್ಯಕ್ರಮ
48 ಬಾರಿ ರಕ್ತದಾನ ಮಾಡಿರುವ ಎಸ್.ಡಿ.ಎಂ ಕಾಲೇಜಿನ ಪಾಲಿಟೆಕ್ನಿಕ್ ಉಪನ್ಯಾಸಕರು ಹಾಗೂ ರೆಡ್ ಕ್ರಾಸ್ ವಿಭಾಗದ ಕಾರ್ಯನಿರ್ವಹಣಾಧಿಕಾರಿಯಾದ ಅವನೀಶ್ ಮತ್ತು ಉಜಿರೆ ವರ್ತಕರ ಸಂಘದ ಅಧ್ಯಕ್ಷರು ರಮ್ಯಾ 1 ಗ್ರಾಂ ಗೋಲ್ಡ್ ಅಂಡ್ ಫ್ಯಾನ್ಸಿ ಇದರ ಮಾಲಕರು 30 ಬಾರಿ ರಕ್ತದಾನ ಮಾಡಿರುವ ಪ್ರಸಾದ್ ಬಿ ಎಸ್ ರವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಘಟಕ ಅಧ್ಯಕ್ಷ ಮೊಹಮ್ಮದ್ ಮಿರ್ಷಾದ್ ರವರು ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಮಹಿಳಾ ಜೆಸಿ ವಿಭಾಗದ ಸಂಯೋಜಕಿ ಹೇಮಾವತಿ.ಕೆ ಸನ್ಮಾನ ಪತ್ರ ವಾಚಿಸಿದರು. ಕಾರ್ಯದರ್ಶಿ ಭವ್ಯಶ್ರೀ ಧನ್ಯವಾದ ಸಮರ್ಪಿಸಿದರು. ಜೆಸಿ ಸದಸ್ಯೆ ಸುಮಿತ್ರಾ ರವರು ಜೆಸಿ ವಾಣಿ ಉದ್ಘೋಷಿಸಿದರು.

ಕಾರ್ಯಕ್ರಮದಲ್ಲಿ ಜೆಸಿಐ ಸದಸ್ಯರು ಹಾಗೂ ಸೇವಾ ಭಾರತಿ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಬಡೆಕ್ಕಾವುದ ಸತ್ಯೋಲು ಭಕ್ತಿ ಸುಗಿಪು ವೀಡಿಯೋ-ಆಡಿಯೋ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ವಸಂತಿ ನಿಧನ

Suddi Udaya
error: Content is protected !!