August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ-ಕೋರ್ಟು ರಸ್ತೆಯಲ್ಲಿ ಅಪಾಯಕಾರಿ ಗುಂಡಿಗೆ ರೆಡ್ ಟೇಪ್ ಹಾಕಿ ಎಚ್ಚರಿಕೆ

ಬೆಳ್ತಂಗಡಿ: ಬೆಳ್ತಂಗಡಿಯಿಂದ ಕೋರ್ಟುಗೆ ಹೋಗುವ ರಸ್ತೆ ಬದಿಯಲ್ಲಿ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಚಾಲಕರಿಗೆ ಹಾಗೂ ಪಾದಾಚಾರಿಗಳಿಗೆ ಅಪಾಯವನ್ನು ತಂದೊಡ್ಡಿದೆ. ಇದೀಗ ಗುಂಡಿ ಗೋಚರಿಸಲು ಕೆಂಪುಪಟ್ಟಿ ಹಾಕಲಾಗಿದೆ. ಸುದ್ದಿ ಉದಯ ವಾರ ಪತ್ರಿಕೆಯಲ್ಲಿ ಜೂ.11 ರಂದು ಪ್ರಕಟವಾದ ವಿಶೇಷ ವರದಿಯಾ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಸಾರ್ವಜನಿಕರ ಸುರಕ್ಷತೆಗಾಗಿ ಗುಂಡಿಯ ಸುತ್ತ ಕೆಂಪು ಪಟ್ಟಿ ಹಾಕಿದ್ದಾರೆ.

ಕೋರ್ಟು ರಸ್ತೆಗೆ ತಾಗಿಕೊಂಡೇ ಈ ಗುಂಡಿ ನಿರ್ಮಾಣವಾಗಿದ್ದು, ವಾಹನಗಳಲ್ಲಿ ಬರುವ ಚಾಲಕರಿಗೆ ಇದು ಪಕ್ಕನೆ ಅರಿವಿಗೆ ಬರುವುದಿಲ್ಲ, ಯಾರೋ ಒಬ್ಬರು ಪುಣ್ಯಾತ್ಮರು ಗುಂಡಿ ನಿರ್ಮಾಣವಾದ ಜಾಗದ ಬಳಿ ರಸ್ತೆಯಲ್ಲಿ ಕಲ್ಲೊಂದನ್ನು ಇಟ್ಟು ಇಲ್ಲಿ ಅಪಾಯ ಇದೆ ಎಂಬ ಬಗ್ಗೆ ಎಚ್ಚರಿಸುವ ಕೆಲಸವನ್ನು ಮಾಡಿದ್ದರು. ಈ ರಸ್ತೆಯಲ್ಲಿ ಕೋರ್ಟು, ಸುದೇಮುಗೇರು, ಸಂಜಯನಗದ ಕಡೆ ಪ್ರತಿ ದಿನ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಹೋಗುತ್ತಾರೆ. ಹಲವಾರು ವಾಹನಗಳ ಓಡಾಟ ಇದೆ. ರಸ್ತೆಯ ಎರಡು ಬಂದಿಯ ಕುಸಿದ ಗುಂಡಿ ನಿರ್ಮಾಣವಾದರೂ ಸಂಬಂಧಪಟ್ಟ ಇಲಾಖೆಯಾಗಲಿ ಅಧಿಕಾರಿಗಳಾಗಲಿ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆವಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Related posts

ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪ. ಪೂ. ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ರಾಜ್ಯಕ್ಕೆ ಹಿರಿಮೆ ತಂದ ಎಕ್ಸೆಲ್ ಗುರುವಾಯನಕೆರೆಯ ನೀಟ್ ಫಲಿತಾಂಶ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya
error: Content is protected !!