25.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಣ್ಯ ಇಲಾಖೆಯ ಸಹಯೋಗದಲ್ಲಿ ರಸ್ತೆ ನಿರ್ಮಾಣ ಆಗಲಿ :ಮೋಹನ್ ಗೌಡ ಕಲ್ಮoಜ

ಬೆಳ್ತಂಗಡಿ: ಪಶ್ಚಿಮ ಘಟ್ಟ ತಪ್ಪಲಿನ ಕುದುರೆಮುಖ ಅಭಯ ಅರಣ್ಯ ಪ್ರದೇಶ ಒಳಪಟ್ಟ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ದಿಡುಪೆ ಎಳನೀರು ಸಂಸೆ ಕಳಸ ರಸ್ತೆ ಅರಣ್ಯ ಇಲಾಖೆಯ ಸಹಯೋಗದಲ್ಲಿ ನಿರ್ಮಾಣ ಆಗಲಿ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರು, ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಅಧ್ಯಕ್ಷ ಮೋಹನ್ ಗೌಡ ಕಲ್ಮoಜ ಸರಕಾರಕ್ಕೆ ಅಗ್ರಹಿಸಿದ್ದಾರೆ.

ನಮ್ಮ ಸಮಾಜ ಬಾಂಧವರೇ ಹೆಚ್ಚಾಗಿ ಇರುವ ಪ್ರದೇಶ ಇದು. ವಿದ್ಯಾರ್ಥಿಗಳಿಗೆ ಕೃಷಿಕರಿಗೆ ಉದ್ಯೋಗಿಗಳಿಗೆ ಬೆಳ್ತಂಗಡಿ ತಾಲೂಕು ಸಂಪರ್ಕ ಒಂದು ದೊಡ್ಡ ದುರಂತ ಸವಾಲಿನ ಸಂಗತಿ. ರಾಷ್ಟ್ರದ ಅನೇಕ ಅರಣ್ಯ ಪ್ರದೇಶಗಳ ಪ್ರಕೃತಿ ರಮಣೀಯ ಸ್ಥಳ ವೀಕ್ಷಣೆ ವಿಹಾರ ರಸ್ತೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅರಣ್ಯ ಇಲಾಖೆ ಸುಂಕ ವಸೂಲಿ ಟಿಕೆಟ್ ಇತ್ಯಾದಿಗಳು ಮೂಲಕ ಆದಾಯ ಮಾಡುತ್ತಿರುವ ಸಂದರ್ಭದಲ್ಲಿ ಈ ರಸ್ತೆಯ ನಿರ್ಮಾಣಕ್ಕೂ ಇದೇ ಮಾದರಿಯಲ್ಲಾದರೂ ನಮಗೆ ರಸ್ತೆ ನಿರ್ಮಾಣ ಮೂಲಕ ಚಿಕ್ಕಮಗಳೂರು ದಕ್ಷಿಣ ಕನ್ನಡ ಜನತೆಯ ಸಂಪರ್ಕ ಕೊಂಡಿಯಾಗಬೇಕು. ಈ ಮೂಲಕ ಹೊರನಾಡು,ಕಳಸ ,ಶೃಂಗೇರಿ , ಧರ್ಮಸ್ಥಳ ದೇವಸ್ಥಾನ ಗಳಿಗೆ ಆಗಮಿಸುವ ಭಕ್ತರ. ಪ್ರಯಾಣಕ್ಕೂ ಅತೀ ಸಮೀಪ ರಸ್ತೆ ಜೊತೆ ಈ ಭಾಗದ ಜನತೆಯ ಆದಾಯ ಕೂಡ ಹೆಚ್ಚಾಗಲಿದೆ. ಅದ್ಭುತ ಪ್ರಕೃತಿ ರಮಣೀಯ ನೇತ್ರಾವತಿ ಉಗಮ ಸ್ಥಾನ ಜೊತೆ ಅನೇಕ ಸೌಂದರ್ಯ ಜಲಪಾತಗಳು ಇಲ್ಲಿವೆ. ಸರಕಾರ ಮನಸ್ಸು ಮಾಡಿ ಪ್ರವಾಸಿಗರ ಮನ ಸೆಳೆದು ಆದಾಯ ಹೆಚ್ಚಿಸಲು ತಾಲೂಕಿನ ಗೌರವ ಪ್ರಸಿದ್ದಿ ಹೆಚ್ಚಿಸಲು.. ವಿದ್ಯಾರ್ಥಿಗಳ. ಭವಿಷ್ಯ ದೃಷ್ಟಿ ಯಿಂದ ಆದರೂ ಈ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ದೊಡ್ಡ ಮನಸ್ಸು ಮಾಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರು ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಅಧ್ಯಕ್ಷ ಮೋಹನ್ ಗೌಡ ಕಲ್ಮoಜ ಸರಕಾರಕ್ಕೆ ವಿನಂತಿ ಮಾಡಿದ್ದಾರೆ.

ನೂತನ ಜಿಲ್ಲಾ ಸಂಸದ ಬ್ರಿಜೇಶ್ ಚೌಟರು ತಾಲೂಕಿನಲ್ಲಿ ನೂತನ ರಸ್ತೆಗಳಿಗೆ ಸಿಆರ್ ಎಫ್ ನಿಧಿಯಿಂದ ಅನುದಾನ ತಂದಿದ್ದಾರೆ ತಕ್ಷಣವೇ ಈ ಪ್ರದೇಶಕ್ಕೆ ಭೇಟಿ ನೀಡಿ ಬೆಳ್ತಂಗಡಿ ತಾಲೂಕು ದಕ್ಷಿಣ ಕನ್ನಡ ವ್ಯಾಪ್ತಿಯವರೆಗಾದರೂ ರಸ್ತೆ ನಿರ್ಮಾಣ ಮಾಡಬೇಕು ಎಂದು ಅಗ್ರಹಿಸಿದ್ದಾರೆ.

Related posts

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya
error: Content is protected !!