25.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಹೆದ್ದಾರಿ ಬದಿ ಕೊಳಚೆ ನೀರು ಸಂಗ್ರಹ: ಸಾಂಕ್ರಾಮಿಕ ರೋಗದ ಭೀತಿ

ಉಜಿರೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ- ಉಜಿರೆ ರಸ್ತೆಯ ಉಜಿರೆಯ ಕೆಳಗಿನ ಪೆಟ್ರೋಲ್ ಪಂಪ್ ಬಳಿ ಸಂಗ್ರಹವಾಗಿರುವ ಕೊಳಚೆ ನೀರು ಸಾಂಕ್ರಾಮಿಕ ರೋಗ ಭೀತಿ ಉಂಟು ಮಾಡಿದೆ.

ಉಜಿರೆಯ ಪ್ರಮುಖ ಪ್ರದೇಶವಾದ ಇಲ್ಲಿ ಶಾಲೆ, ಹಲವಾರು ಅಂಗಡಿ, ಮನೆಗಳು ಇವೆ. ಈ ಪ್ರದೇಶದ ಚರಂಡಿಯ ಸುಮಾರು 100 ಮೀ. ದೂರಕ್ಕೆ ಕೊಳಚೆ ನೀರು ಸಂಗ್ರಹಗೊಂಡಿದ್ದು ಪರಿಸರ ದುರ್ನಾತ ಬೀರುತ್ತಿದೆ.

ಪ್ರತಿ ಮಳೆಗಾಲದಲ್ಲಿ ಇದು ಇಲ್ಲಿನ ಸಮಸ್ಯೆಯಾಗಿದ್ದು ಈ ಬಾರಿ ಉಲ್ಬಣಿಸಿದೆ. ಕಳೆದ ವಾರ ಸುರಿದ ಮಳೆಯ ಜತೆ ಹರಿದ ಕೊಳಚೆ ನೀರು ಭಾರಿ ಪ್ರಮಾಣದಲ್ಲಿ ಸಂಗ್ರಹಗೊಂಡಿರುವುದು ಅಪಾಯಕಾರಿಯಾಗಿದೆ. ಮಳೆಗಾಲದಲ್ಲಿ ಆಗಾಗ ಈ ಪ್ರದೇಶದಲ್ಲಿ ಮಳೆ ನೀರು ಚರಂಡಿಯಿಂದ ರಸ್ತೆಗೆ ಹರಿದು ಸಂಚಾರಕ್ಕೆ ಸಮಸ್ಯೆ ಉಂಟಾಗುವುದು ಮಾಮೂಲು. ಜೋರಾದ ಮಳೆ ಸಂದರ್ಭ ಚರಂಡಿಯಲ್ಲಿ ಹರಿಯುವ ಕೊಳಚೆ ನೀರಿನ ಜತೆ ಮಳೆ ನೀರು ಸೇರಿ ರಸ್ತೆಯಲ್ಲಿ ಹರಿದು ಅಂಗಡಿ, ಮನೆಗಳ ಮುಂಭಾಗದವರೆಗೂ ಬರುತ್ತದೆ.

ಸಾಂಕ್ರಾಮಿಕ ರೋಗ ಭೀತಿ: ಪ್ರಸ್ತುತ ಕಳೆದ ಕೆಲವು ದಿನಗಳಿಂದ ಇಲ್ಲಿನ ಚರಂಡಿಯಲ್ಲಿ ತುಂಬಿರುವ ನೀರು ಲಾರ್ವಾ ಉತ್ಪತ್ತಿಗೆ ಕಾರಣವಾಗುತ್ತಿದ್ದು, ಪರಿಸರದ ಜನರಲ್ಲಿ ಸಾಂಕ್ರಾಮಿಕ ರೋಗ ಭೀತಿ ಹರಡಿದೆ. ಸಮೀಪದಲ್ಲಿ ಶಾಲೆ ಇರುವುದರಿಂದ ಮಕ್ಕಳಿಗೂ ಇದು ಅಪಾಯಕಾರಿಯಾಗಿದೆ. ಹೆಚ್ಚು ಚರಂಡಿಯಲ್ಲಿ ಗಿಡಗಂಟಿ ಇಲ್ಲದಿದ್ದರೂ ಕೊಳಚೆ ನೀರು ಸರಿಯಾಗಿ ಹರಿಯದೆ ಸಂಗ್ರಹಗೊಳ್ಳುತ್ತಿದೆ. ಚರಂಡಿಯ ಪ್ರದೇಶದಲ್ಲಿ ನಿರ್ಮಿಸಿರುವ ಸಂಪರ್ಕ ರಸ್ತೆ ಅಲ್ಲಲ್ಲಿ ಮುಚ್ಚಿರುವುದು, ಚರಂಡಿ ಕಾಮಗಾರಿ ಪೂರ್ಣಗೊಳ್ಳ ದಿರುವುದು, ಚರಂಡಿಯಲ್ಲಿ ಕೇಬಲ್, ಪ್ಲಾಸ್ಟಿಕ್, ಬಾಟಲಿ ಮೊದಲಾದ ತ್ಯಾಜ್ಯಗಳು ಇದ್ದು ನೀರು ಸರಾಗವಾಗಿ ಹರಿಯಲು ಅಡ್ಡಿಯಾಗಿದೆ.

ಸುಸಜ್ಜಿತ ಚರಂಡಿ ಬೇಕು: ಈ ಪ್ರದೇಶದಲ್ಲಿ ಉಜಿರೆ ಗ್ರಾಮದ ಹೆಚ್ಚಿನ ಕೊಳಚೆ ನೀರು ಹರಿದು ಹೋಗುತ್ತದೆ. ಹೆದ್ದಾರಿ ಕಾಮಗಾರಿ ಇಲ್ಲಿ ನಡೆಯುತ್ತಿದೆ. ಹೆದ್ದಾರಿ ಕಾಮಗಾರಿ ವೇಳೆ ಇಲ್ಲಿ ಸುಸಜ್ಜಿತ ಚರಂಡಿ ನಿರ್ಮಾಣವಾಗಬಹುದು ಎಂಬ ಭರವಸೆಯಲ್ಲಿದ್ದ ಸ್ಥಳೀಯರಿಗೆ ಈಗ ಹೆಚ್ಚಿನ ಸಮಸ್ಯೆ ಕಂಡು ಬರುತ್ತಿದೆ. ಈ ಚರಂಡಿಯನ್ನು ವ್ಯವಸ್ಥಿತವಾಗಿ ನಿರ್ಮಿಸಿ ತಗ್ಗು ಪ್ರದೇಶದಲ್ಲಿ ಹರಿಯುವ ಹಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಗತ್ಯವಿದೆ.

Related posts

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ – ಸುರಕ್ಷತೆ ಹಾಗೂ ‘ಮುಟ್ಟಿನ ನೈರ್ಮಲ್ಯ ದಿನಾಚರಣೆ’ ಜಾಗೃತಿ ಕಾರ್ಯಕ್ರಮ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!