25.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಗಸ್ಟೀನ್ ಟಿ.ಎ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಉಪಾಧ್ಯಕ್ಷ ಮ್ಯಾಥ್ಯೂ ವಿ.ಟಿ. ಸ್ವಾಗತಿಸಿದರು. ಕಾರ್ಯದರ್ಶಿ ಶಿಜೋ ಜೋಸೆಫ್ ಅವರು 2025–26ನೇ ಸಾಲಿನ ವಾರ್ಷಿಕ ವರದಿಯನ್ನು ಹಾಗೂ ಕೋಶಾಧಿಕಾರಿ ರಂಜಿತ್ ಪಿ.ಎಸ್. ಅವರು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಸದಸ್ಯರು ವರದಿ ಮತ್ತು ಲೆಕ್ಕಪತ್ರವನ್ನು ಸರ್ವಾನುಮತದಿಂದ ಅಂಗೀಕರಿಸಿದರು.

ಕಳೆದ ಸಾಲಿನಲ್ಲಿ ಸಂಘವು ಕಾರುಣ್ಯ ಸ್ಪರ್ಶಂ ಯೋಜನೆಯಡಿ ಆರ್ಥಿಕ ನೆರವು, ಸಿಆರ್ ಪಿ ತರಬೇತಿ, ರಕ್ತದಾನ ಶಿಬಿರಗಳಲ್ಲಿ ಭಾಗವಹಿಸುವಿಕೆ ಸೇರಿದಂತೆ ವಿವಿಧ ಸಾಮಾಜಿಕ ಹಾಗೂ ಮಾನವೀಯ ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದೆ ಎಂದು ವರದಿಯಲ್ಲಿ ತಿಳಿಸಲಾಯಿತು. ದಿವಂಗತ ಡಾ. ಟಿ.ವಿ. ಜೋಸೆಫ್ ಅವರ ಸ್ಮರಣಾರ್ಥ ಸಂಗ್ರಹಿಸಲಾದ ರೂ. 5,45,971 ಮೊತ್ತವನ್ನು ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಲಿಜೋ ಆಂಟನಿ ಎಂಬ ಮಗುವಿನ ಚಿಕಿತ್ಸೆಗೆ ಹಸ್ತಾಂತರಿಸಿರುವುದನ್ನು ಸಭೆಯಲ್ಲಿ ವಿಶೇಷವಾಗಿ ಪ್ರಶಂಸಿಸಲಾಯಿತು.

ಸಭೆಯಲ್ಲಿ ಸದಸ್ಯತ್ವ, ಕಾರುಣ್ಯ ಸ್ಪರ್ಶಂ ಯೋಜನೆ, ಮಾಸಿಕ ಸಭೆಗಳು ಹಾಗೂ ಸಂಘದ ನಿಧಿ ವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಅಧ್ಯಕ್ಷ ಅಗಸ್ಟೀನ್ ಟಿ.ಎ., ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ. ಹಾಗೂ ಗೌರವ ಸಲಹೆಗಾರರಾದ ಜೋಸೆಫ್ ಕೆ.ಡಿ. ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.

Related posts

ಉಜಿರೆ ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಸಮಾರೋಪ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya
error: Content is protected !!