August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಗಸ್ಟೀನ್ ಟಿ.ಎ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಉಪಾಧ್ಯಕ್ಷ ಮ್ಯಾಥ್ಯೂ ವಿ.ಟಿ. ಸ್ವಾಗತಿಸಿದರು. ಕಾರ್ಯದರ್ಶಿ ಶಿಜೋ ಜೋಸೆಫ್ ಅವರು 2025–26ನೇ ಸಾಲಿನ ವಾರ್ಷಿಕ ವರದಿಯನ್ನು ಹಾಗೂ ಕೋಶಾಧಿಕಾರಿ ರಂಜಿತ್ ಪಿ.ಎಸ್. ಅವರು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಸದಸ್ಯರು ವರದಿ ಮತ್ತು ಲೆಕ್ಕಪತ್ರವನ್ನು ಸರ್ವಾನುಮತದಿಂದ ಅಂಗೀಕರಿಸಿದರು.

ಕಳೆದ ಸಾಲಿನಲ್ಲಿ ಸಂಘವು ಕಾರುಣ್ಯ ಸ್ಪರ್ಶಂ ಯೋಜನೆಯಡಿ ಆರ್ಥಿಕ ನೆರವು, ಸಿಆರ್ ಪಿ ತರಬೇತಿ, ರಕ್ತದಾನ ಶಿಬಿರಗಳಲ್ಲಿ ಭಾಗವಹಿಸುವಿಕೆ ಸೇರಿದಂತೆ ವಿವಿಧ ಸಾಮಾಜಿಕ ಹಾಗೂ ಮಾನವೀಯ ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದೆ ಎಂದು ವರದಿಯಲ್ಲಿ ತಿಳಿಸಲಾಯಿತು. ದಿವಂಗತ ಡಾ. ಟಿ.ವಿ. ಜೋಸೆಫ್ ಅವರ ಸ್ಮರಣಾರ್ಥ ಸಂಗ್ರಹಿಸಲಾದ ರೂ. 5,45,971 ಮೊತ್ತವನ್ನು ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಲಿಜೋ ಆಂಟನಿ ಎಂಬ ಮಗುವಿನ ಚಿಕಿತ್ಸೆಗೆ ಹಸ್ತಾಂತರಿಸಿರುವುದನ್ನು ಸಭೆಯಲ್ಲಿ ವಿಶೇಷವಾಗಿ ಪ್ರಶಂಸಿಸಲಾಯಿತು.

ಸಭೆಯಲ್ಲಿ ಸದಸ್ಯತ್ವ, ಕಾರುಣ್ಯ ಸ್ಪರ್ಶಂ ಯೋಜನೆ, ಮಾಸಿಕ ಸಭೆಗಳು ಹಾಗೂ ಸಂಘದ ನಿಧಿ ವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಅಧ್ಯಕ್ಷ ಅಗಸ್ಟೀನ್ ಟಿ.ಎ., ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ. ಹಾಗೂ ಗೌರವ ಸಲಹೆಗಾರರಾದ ಜೋಸೆಫ್ ಕೆ.ಡಿ. ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.

Related posts

ಡಿ.26 ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya

ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣೆ

Suddi Udaya
error: Content is protected !!