24 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಉಜಿರೆ ಸಿಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನದ ಜಾಗೃತಿ – ಮಾಹಿತಿ ಕಾರ್ಯಾಗಾರ

ಉಜಿರೆ : ಜೆಸಿಐ ಉಜಿರೆ ಸಿಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಎರಡು ಪ್ರಮುಖ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ರಕ್ತದಾನದ ಜಾಗೃತಿ – ಮಾಹಿತಿ ಕಾರ್ಯಾಗಾರ
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸೇವಾ ಭಾರತಿ ಸಂಸ್ಥೆಯ ಸಂಸ್ಥಾಪಕರು, ಅಧ್ಯಕ್ಷ ವಿನಾಯಕ ರಾವ್ ರವರು ರಕ್ತದಾನ ಶಿಬಿರ ಆಯೋಜನೆಯ ತಮ್ಮ ಸ್ವಅನುಭವಗಳನ್ನು ಹಂಚಿಕೊಂಡು, ರಕ್ತದಾನದ ಮಹತ್ವವನ್ನು ತಿಳಿಸಿದರು. “ಬ್ಲಡ್ ಡೊನೇಟ್” ತುರ್ತು ಸೌಲಭ್ಯವನ್ನು ಹೊಂದಿರುವ ಸೇವಾ ಭಾರತಿ ಸಂಸ್ಥೆಯ ಬಗ್ಗೆ ಮಾಹಿತಿ ನೀಡಿ, ಅಗತ್ಯ ಸಂದರ್ಭದಲ್ಲಿ ಸಂಪರ್ಕಿಸುವಂತೆ ತಿಳಿಸಿ ಇವರು ಜೆಸಿಐ ಉಜಿರೆ ಘಟಕದ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.

ಸನ್ಮಾನ ಕಾರ್ಯಕ್ರಮ
48 ಬಾರಿ ರಕ್ತದಾನ ಮಾಡಿರುವ ಎಸ್.ಡಿ.ಎಂ ಕಾಲೇಜಿನ ಪಾಲಿಟೆಕ್ನಿಕ್ ಉಪನ್ಯಾಸಕರು ಹಾಗೂ ರೆಡ್ ಕ್ರಾಸ್ ವಿಭಾಗದ ಕಾರ್ಯನಿರ್ವಹಣಾಧಿಕಾರಿಯಾದ ಅವನೀಶ್ ಮತ್ತು ಉಜಿರೆ ವರ್ತಕರ ಸಂಘದ ಅಧ್ಯಕ್ಷರು ರಮ್ಯಾ 1 ಗ್ರಾಂ ಗೋಲ್ಡ್ ಅಂಡ್ ಫ್ಯಾನ್ಸಿ ಇದರ ಮಾಲಕರು 30 ಬಾರಿ ರಕ್ತದಾನ ಮಾಡಿರುವ ಪ್ರಸಾದ್ ಬಿ ಎಸ್ ರವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಘಟಕ ಅಧ್ಯಕ್ಷ ಮೊಹಮ್ಮದ್ ಮಿರ್ಷಾದ್ ರವರು ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಮಹಿಳಾ ಜೆಸಿ ವಿಭಾಗದ ಸಂಯೋಜಕಿ ಹೇಮಾವತಿ.ಕೆ ಸನ್ಮಾನ ಪತ್ರ ವಾಚಿಸಿದರು. ಕಾರ್ಯದರ್ಶಿ ಭವ್ಯಶ್ರೀ ಧನ್ಯವಾದ ಸಮರ್ಪಿಸಿದರು. ಜೆಸಿ ಸದಸ್ಯೆ ಸುಮಿತ್ರಾ ರವರು ಜೆಸಿ ವಾಣಿ ಉದ್ಘೋಷಿಸಿದರು.

ಕಾರ್ಯಕ್ರಮದಲ್ಲಿ ಜೆಸಿಐ ಸದಸ್ಯರು ಹಾಗೂ ಸೇವಾ ಭಾರತಿ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಾಗಾರ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

Suddi Udaya

ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya
error: Content is protected !!