August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೀರಿನ ಯೂನಿಟ್ ಮಿತಿ ಹೆಚ್ಚಳಕ್ಕೆ ಎಸ್‌ಡಿಪಿಐ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 08ರ ಕಕ್ಕೇಜಾಲ್ ಗಾಂಧಿನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಬಳಕೆಯ ಯೂನಿಟ್ ಮಿತಿಯನ್ನು ಹೆಚ್ಚಿಸುವಂತೆ ಹಾಗೂ ಹೆಚ್ಚುವರಿ ಬಳಕೆಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಪರಿಷ್ಕರಿಸುವಂತೆ ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರದೇಶದ ಹೆಚ್ಚಿನ ನಿವಾಸಿಗಳು ದಿನಗೂಲಿ ಕಾರ್ಮಿಕರಾಗಿದ್ದು, ಪ್ರಸ್ತುತ ನಿಗದಿಪಡಿಸಿರುವ 7 ಯೂನಿಟ್‌ಗಳ ಮಿತಿಗಿಂತ ಹೆಚ್ಚಿನ ನೀರಿನ ಬಳಕೆ ಅನಿವಾರ್ಯವಾಗುತ್ತಿದೆ. ಇದರ ಪರಿಣಾಮವಾಗಿ ಮಾಸಿಕ ನೀರಿನ ಬಿಲ್ ಹೆಚ್ಚಾಗಿ ಬಂದು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೊರೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಆದ್ದರಿಂದ ಒಂದು ಮನೆಗೆ ನಿಗದಿಪಡಿಸಿರುವ ನೀರಿನ ಬಳಕೆಯ ಮಿತಿಯನ್ನು 7 ಯೂನಿಟ್‌ನಿಂದ 20 ಯೂನಿಟ್‌ಗಳಿಗೆ ಹೆಚ್ಚಿಸಬೇಕು. ಜೊತೆಗೆ ಹೆಚ್ಚುವರಿ ಯೂನಿಟ್‌ಗಳಿಗೆ ವಿಧಿಸಲಾಗುವ ಶುಲ್ಕವನ್ನು ಮರುಪರಿಶೀಲಿಸಿ ಕಡಿತಗೊಳಿಸಬೇಕು. ಅಲ್ಲದೆ 40 ಯೂನಿಟ್‌ಗಳವರೆಗೆ ನೀರಿನ ಬಳಕೆಯನ್ನು ಯಾವುದೇ ಕಾರಣಕ್ಕೂ ವಾಣಿಜ್ಯ (ಕಮರ್ಷಿಯಲ್) ಸಂಪರ್ಕವೆಂದು ಪರಿಗಣಿಸಬಾರದು ಎಂದು ಆಗ್ರಹಿಸಲಾಗಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪಂಚಾಯತ್ ಅಧಿಕಾರಿಗಳಿಗೆ ಕೋರಲಾಗಿದೆ. ಈ ಸಂದರ್ಭದಲ್ಲಿ ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ಅಧ್ಯಕ್ಷ ಇರ್ಫಾನ್ ಕಕ್ಕೇಜಾಲ್, ಕಾರ್ಯದರ್ಶಿ ಸವಾದ್, ಶರ್ವಾನ್, ಇಲ್ಯಾಸ್ ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya

ರಸ್ತೆ ಮಧ್ಯೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

Suddi Udaya

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಮೂಲ್ಯ – ಕುಂಬಾರ ಸಮುದಾಯದವರು ಜಾತಿ ಕಾಲಂನಲ್ಲಿ ಕುಂಬಾರ ಎಂದು ನಮೂದಿಸುವಂತೆ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಹೇಳಿಕೆ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya
error: Content is protected !!