ಬೆಳ್ತಂಗಡಿ: ಬೆಳ್ತಂಗಡಿಯಿಂದ ಕೋರ್ಟುಗೆ ಹೋಗುವ ರಸ್ತೆ ಬದಿಯಲ್ಲಿ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಚಾಲಕರಿಗೆ ಹಾಗೂ ಪಾದಾಚಾರಿಗಳಿಗೆ ಅಪಾಯವನ್ನು ತಂದೊಡ್ಡಿದೆ. ಇದೀಗ ಗುಂಡಿ ಗೋಚರಿಸಲು ಕೆಂಪುಪಟ್ಟಿ ಹಾಕಲಾಗಿದೆ. ಸುದ್ದಿ ಉದಯ ವಾರ ಪತ್ರಿಕೆಯಲ್ಲಿ ಜೂ.11 ರಂದು ಪ್ರಕಟವಾದ ವಿಶೇಷ ವರದಿಯಾ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಸಾರ್ವಜನಿಕರ ಸುರಕ್ಷತೆಗಾಗಿ ಗುಂಡಿಯ ಸುತ್ತ ಕೆಂಪು ಪಟ್ಟಿ ಹಾಕಿದ್ದಾರೆ.
ಕೋರ್ಟು ರಸ್ತೆಗೆ ತಾಗಿಕೊಂಡೇ ಈ ಗುಂಡಿ ನಿರ್ಮಾಣವಾಗಿದ್ದು, ವಾಹನಗಳಲ್ಲಿ ಬರುವ ಚಾಲಕರಿಗೆ ಇದು ಪಕ್ಕನೆ ಅರಿವಿಗೆ ಬರುವುದಿಲ್ಲ, ಯಾರೋ ಒಬ್ಬರು ಪುಣ್ಯಾತ್ಮರು ಗುಂಡಿ ನಿರ್ಮಾಣವಾದ ಜಾಗದ ಬಳಿ ರಸ್ತೆಯಲ್ಲಿ ಕಲ್ಲೊಂದನ್ನು ಇಟ್ಟು ಇಲ್ಲಿ ಅಪಾಯ ಇದೆ ಎಂಬ ಬಗ್ಗೆ ಎಚ್ಚರಿಸುವ ಕೆಲಸವನ್ನು ಮಾಡಿದ್ದರು. ಈ ರಸ್ತೆಯಲ್ಲಿ ಕೋರ್ಟು, ಸುದೇಮುಗೇರು, ಸಂಜಯನಗದ ಕಡೆ ಪ್ರತಿ ದಿನ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಹೋಗುತ್ತಾರೆ. ಹಲವಾರು ವಾಹನಗಳ ಓಡಾಟ ಇದೆ. ರಸ್ತೆಯ ಎರಡು ಬಂದಿಯ ಕುಸಿದ ಗುಂಡಿ ನಿರ್ಮಾಣವಾದರೂ ಸಂಬಂಧಪಟ್ಟ ಇಲಾಖೆಯಾಗಲಿ ಅಧಿಕಾರಿಗಳಾಗಲಿ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆವಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.












