31.7 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಆಯ್ಕೆ

ಉಜಿರೆ: ಉಜಿರೆಯ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮಾಸ್ಟರ್ ಕ್ಷಿತಿಜ್ ಎಸ್. ಶೆಟ್ಟಿ ಅವರು ರೋಟರಿ ಇಂಟರ್‌ನ್ಯಾಷನಲ್ ಜಿಲ್ಲಾ 3181ರ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿ (District Interact Representative – DIR) ಆಗಿ 2026-27ನೇ ಸಾಲಿಗೆ ಆಯ್ಕೆಯಾಗಿರುವುದು ಶಾಲೆಗೆ ಹಾಗೂ ಸಮಗ್ರ ಎಸ್.ಡಿ.ಎಮ್ ಕುಟುಂಬಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ಕ್ಷಿತಿಜ್ ಅವರು ತಮ್ಮ ಅತ್ಯುತ್ತಮ ನಾಯಕತ್ವ ಗುಣಗಳು, ಸೇವಾ ಮನೋಭಾವ, ಆತ್ಮವಿಶ್ವಾಸ ಮತ್ತು ಸಮರ್ಪಣೆಯ ಮೂಲಕ ಈ ಗೌರವಾನ್ವಿತ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಅವರು ಜಿಲ್ಲಾ ಮಟ್ಟದಲ್ಲಿ ವಿವಿಧ ಇಂಟರಾಕ್ಟ್ ಕ್ಲಬ್‌ಗಳ ಚಟುವಟಿಕೆಗಳಿಗೆ ನೇತೃತ್ವ ವಹಿಸಿ ಯುವಜನರಲ್ಲಿ ಸೇವಾ ಮನೋಭಾವ ಮತ್ತು ನಾಯಕತ್ವ ಕೌಶಲ್ಯಗಳನ್ನು ಬೆಳೆಸುವ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರು ಮನಮೋಹನ್ ನಾಯಕ್ ಕೆ.ಜಿ ಅಭಿನಂದನೆ ಸಲ್ಲಿಸಿ, “ಕ್ಷಿತಿಜ್ ಅವರ ಈ ಸಾಧನೆ ಅವರ ನಾಯಕತ್ವ ಸಾಮರ್ಥ್ಯ ಪ್ರತಿಬಿಂಬಿಸುತ್ತದೆ. ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸು ಗಳಿಸಿ ಯುವ ಸಮುದಾಯಕ್ಕೆ ಮಾದರಿಯಾಗಲಿ” ಎಂದು ಹಾರೈಸಿದರು.

ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕ್ಷಿತಿಜ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದು, ಅವರ ಮುಂದಿನ ಎಲ್ಲ ಪ್ರಯತ್ನಗಳಿಗೂ ಶುಭ ಹಾರೈಸಿದ್ದಾರೆ.

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

Suddi Udaya
error: Content is protected !!