28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ ) ನಿಂದ ನಡೆಸಲ್ಪಡುವ ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದಲ್ಲಿ “ಯೋಗ ಮಾಡಿ ಆರೋಗ್ಯ ಕಾಪಾಡಿ” ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಯೋಗ ದಿನಾಚರಣೆಯನ್ನು ಜೂ. 20ರಂದು ಆಚರಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ. ಕೆ ದೀಪ ಬೆಳಗಿಸುವುದರ ಮೂಲಕ ಕಾರ್ಯ ಕ್ರಮವನ್ನು ಉದ್ಘಾಟಿಸಿದರು.

ಸಹ ಶಿಕ್ಷಕಿಯಾದ ಕುಮಾರಿ ರೇಷ್ಮಾ ಕಾರ್ಯಕ್ರಮದ ನಿರೂಪಣೆಯನ್ನು ನಡೆಸಿಕೊಟ್ಟು, ಯೋಗದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರ ಮುಖ್ಯೋಪಾಧ್ಯಾಯಿನಿ ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿ, ಯೋಗದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು. ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಯೋಗದ ಮಹತ್ವ ಹಾಗೂ ಆರೋಗ್ಯಕರ ಜೀವನದಲ್ಲಿ ಅದರ ಪಾತ್ರದ ಕುರಿತು ತಿಳಿ ಹೇಳಿದರು.

ಅನಂತರ ದೈಹಿಕ ಶಿಕ್ಷಣ ಶಿಕ್ಷಕಿ ಹರೀಣಾಕ್ಷಿಯವರು ವಿದ್ಯಾರ್ಥಿಗಳಿಗೆ ಯೋಗದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು ಮತ್ತು ತರಗತಿವಾರು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಯೋಗ ಆಸನಗಳನ್ನು ಮಾಡಿಸಿದರು . ಯೋಗವನ್ನು ನಮ್ಮ ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕೆಂದು ಪ್ರತಿಜ್ಞೆ ಸ್ವೀಕರಿಸಲಾಯಿತು . ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Related posts

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಕೊಯ್ಯೂರು : 39 ನೇ ವರ್ಷದ ಶ್ರೀ ಕೃಷ್ಣ ಜನ್ಮಷ್ಟಾಮಿ, ಆಟೋಟ ಸ್ಪರ್ಧೆ

Suddi Udaya

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya
error: Content is protected !!