ಉರುವಾಲು: ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬೆಂಗಳೂರು ಇವರ ಸಿ ಎಸ್ ಆರ್ ನಿಧಿಯಿಂದ, ಯೂತ್ ಪಾರ್ ಸೇವಾ ಸಂಸ್ಥೆ ಯವರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ಬ್ಯಾಗ್, ಪುಸ್ತಕ ಮತ್ತು ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಸ್ತಫಾ ಮುರಿಯಾಳ, ಎಸ್.ಡಿ.ಎಮ್.ಸಿ ಅಧ್ಯಕ್ಷರು ವಹಿಸಿಕೊಂಡರು. ಮುಖ್ಯ ಶಿಕ್ಷಕಿ ಗಿರಿಜಾ ಎನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಟೆಕ್ಸಾಸ್ ಕಂಪನಿಯ ಪ್ರತಿನಿಧಿಗಳು ಕಾರ್ಯಕ್ರಮದ ಉದ್ದೇಶ ತಿಳಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ಜೆ. ಕೆ. ಪೂಜಾರಿ, ನಿವೃತ್ತ ಮುಖ್ಯ ಗುರುಗಳಾದ ಧರ್ಣಪ್ಪ ನಾಯಕ್, ದಾನಿಗಳಾದ ಓಬಯ್ಯ ಪೂಜಾರಿ, ದಾಸಪ್ಪ ಗೌಡ ಕೋಡಿಯಡ್ಕ, ಅಂಗನವಾಡಿ ಕಾರ್ಯಕರ್ತೆ ಶಶಿಪ್ರಭಾ, ಗೌರವ ಶಿಕ್ಷಕಿ ಸಂದೇಶ ಕುಮಾರಿ, ಎಸ್.ಡಿ.ಎಮ್.ಸಿ ಯ ಸದಸ್ಯರು, ಪೋಷಕರು, ಭಾಗವಹಿದ್ದರು. ಸಹಶಿಕ್ಷಕ ಪರಮೇಶ್ವರ್. ಎಸ್ ಕಾರ್ಯಕ್ರಮ ನಿರೂಪಿಸಿದರು.












