ಪುತ್ತೂರು: ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನ ಮತ್ತು ಮೂಲಸ್ಥಾನದಲ್ಲಿ ಸಂಕ್ರಮಣ ಶುಭ ದಿವಸದಂದು ನಾಗ ದೇವರಿಗೆ ಹಾಗೂ ನಾಗಬೆರ್ಮರಿಗೆ ತಂಬಿಲ ಸೇವೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆತಿಗೆ ವಿಶೇಷ ಪೂಜೆ ನಡೆಯಿತು.
ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಬಿ. ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನೆರವೇರಿದವು. ಈ ಸಂದರ್ಭದಲ್ಲಿ ‘ಸು ಫ್ರಮ್ ಸೋ’ ಖ್ಯಾತಿಯ ಪ್ರಮುಖ ನಟ ಶನಿಲ್ ಗೌತಮ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕಾರ್ಯದರ್ಶಿ ಶ್ರೀಧರ್ ಪಟ್ಟ ಪುತ್ತೂರು, ಸದಸ್ಯರಾದ ಚರಣ್ ಕೆ., ಜಗನ್ನಾಥ್ ಬಂಟ್ವಾಳ, ರಾಜೇಶ್ ಕಂಟ್ರಾಕ್ಟರ್, ರವಿ ಬಂಟ್ವಾಳ, ಅಭಿಷೇಕ್ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.












