31.7 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

ಪುತ್ತೂರು: ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನ ಮತ್ತು ಮೂಲಸ್ಥಾನದಲ್ಲಿ ಸಂಕ್ರಮಣ ಶುಭ ದಿವಸದಂದು ನಾಗ ದೇವರಿಗೆ ಹಾಗೂ ನಾಗಬೆರ್ಮರಿಗೆ ತಂಬಿಲ ಸೇವೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆತಿಗೆ ವಿಶೇಷ ಪೂಜೆ ನಡೆಯಿತು.

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಬಿ. ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನೆರವೇರಿದವು. ಈ ಸಂದರ್ಭದಲ್ಲಿ ‘ಸು ಫ್ರಮ್ ಸೋ’ ಖ್ಯಾತಿಯ ಪ್ರಮುಖ ನಟ ಶನಿಲ್ ಗೌತಮ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕಾರ್ಯದರ್ಶಿ ಶ್ರೀಧರ್ ಪಟ್ಟ ಪುತ್ತೂರು, ಸದಸ್ಯರಾದ ಚರಣ್ ಕೆ., ಜಗನ್ನಾಥ್ ಬಂಟ್ವಾಳ, ರಾಜೇಶ್ ಕಂಟ್ರಾಕ್ಟರ್, ರವಿ ಬಂಟ್ವಾಳ, ಅಭಿಷೇಕ್ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.

Related posts

ಇತ್ತೀಚೆಗೆ ಮೃತಪಟ್ಟ ಬೂಡುಮುಗೇರು ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅಭಿನಂದನಾ ಸಮಾರಂಭ

Suddi Udaya
error: Content is protected !!